News Karnataka Kannada
Monday, April 29 2024
ಬೆಳಗಾವಿ

ಕಾಂಗ್ರೆಸ್ ಮತ್ತೆ ಅಧಿಕಾರಕ್ಕೆ ಬಂದರೆ 10 ಕೆಜಿ ಅಕ್ಕಿ ನೀಡುತ್ತೇವೆ: ಸಿದ್ದರಾಮಯ್ಯ

ಶೂದ್ರರು ಮತ್ತು ದಲಿತರಿಗೆ ಆರ್.ಎಸ್.ಎಸ್ ಗರ್ಭಗುಡಿಗೆ ಪ್ರವೇಶ ಇಲ್ಲ, ಅವರೇನಿದ್ದರೂ ಹೊರಬಾಗಿಲಲ್ಲಿ ನಿಂತು 'ಜೀ..ಜೀ..ಹುಜೂರ್' ಎಂದಷ್ಟೇ ಹೇಳಬೇಕು. ಇದಕ್ಕೆ ಬಿಜೆಪಿಯ ಮಾಜಿ ಶಾಸಕ ಗೂಳಿಹಟ್ಟಿ ಶೇಖರ್ ಅವರು ಬಿ.ಎಲ್ ಸಂತೋಷ್‌ ಅವರಿಗೆ ಕಳುಹಿಸಿರುವ ವಾಟ್ಸಾಪ್ ವಾಯ್ಸ್ ರೆಕಾರ್ಡ್ ಸಾಕ್ಷಿ.
Photo Credit :

ಬೆಳಗಾವಿ: ವಿಪಕ್ಷ ನಾಯಕ ಸಿದ್ದರಾಮಯ್ಯ ಮತ್ತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮತ್ತು ರಾಜ್ಯ ಸರ್ಕಾರ ವಿರುದ್ಧ ಟೀಕಾಪ್ರಹಾರ ಮುಂದುವರಿಸಿದ್ದಾರೆ.

ಬೆಳಗಾವಿ ಜಿಲ್ಲೆಯ ರಾಮದುರ್ಗದಲ್ಲಿ ಸಂಗೊಳ್ಳಿ ರಾಯಣ್ಣ ಪ್ರತಿಮೆ ಅನಾವರಣಗೊಳಿಸಿ ಕಾಂಗ್ರೆಸ್ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, 2023ರಲ್ಲಿ ಕಾಂಗ್ರೆಸ್ ಮತ್ತೆ ಅಧಿಕಾರಕ್ಕೆ ಬಂದರೆ 10 ಕೆಜಿ ಅಕ್ಕಿ ಕೊಡುವುದಾಗಿ ಜನರಿಗೆ ಭರವಸೆ ನೀಡಿದರು.

ಬಸವರಾಜ ಬೊಮ್ಮಾಯಿಯವರು ಜನರಿಂದ ಆಯ್ಕೆಯಾದ ಮುಖ್ಯಮಂತ್ರಿ ಅಲ್ಲ, ನೇಮಕಗೊಂಡ ಮುಖ್ಯಮಂತ್ರಿ, ಅಲ್ಲಿ ದುಡ್ಡು ಕೊಟ್ಟು ಬಿಟ್ಟು ಬಂದು ಇಲ್ಲಿ ಮುಖ್ಯಮಂತ್ರಿ ಆಗಿದ್ದಾರೆ, ಹೀಗಾಗಿ ರಾಜ್ಯದ ಜನತೆಗೆ ಉಪಯೋಗವಾಗುವಂತಹ ಕೆಲಸ ಮಾಡುತ್ತಿಲ್ಲ ಎಂದರು.

ಆರ್ ಎಸ್‌ಎಸ್ ನವರು ಮುಖ್ಯಮಂತ್ರಿ ಮಾಡಿದ್ದಾರೆ, ಬೊಮ್ಮಾಯಿಯವರು ಅವರನ್ನು ಕೇಳಿಕೊಂಡು ಕೂತಿದ್ದಾರೆ. ಕಳೆದ 4 ವರ್ಷದ ಬಿಜೆಪಿ ಆಡಳಿತ ಬಡವರಿಗೆ ಒಂದು ಮನೆ ಕೊಟ್ಟಿಲ್ಲ, ನಾನು 5 ವರ್ಷ ಮುಖ್ಯಮಂತ್ರಿಯಾಗಿ 15 ಲಕ್ಷ ಮನೆಗಳನ್ನು ಕಟ್ಟಿಸಿಕೊಟ್ಟಿದ್ದೆ ಎಂದರು.’

2023ರಲ್ಲಿ ಮತ್ತೆ ಕಾಂಗ್ರೆಸ್ ಗೆ ಅಧಿಕಾರ ಕೊಡಿ, ನೇಕಾರರು, ಹೊಸ ಮನೆಗಳು, ಹೊಸ ಊರುಗಳನ್ನು ಕಟ್ಟಿಸಿಕೊಡೋಣ, ಗ್ರಾಮವನ್ನು ಪ್ರವಾಹಕ್ಕೆ ತುತ್ತಾಗದಂತೆ ಮಾಡಿಕೊಡುತ್ತೇವೆ, ಕಾಂಗ್ರೆಸ್ ನ್ನು ಅಧಿಕಾರಕ್ಕೆ ತನ್ನಿ, ಕೈಜೋಡಿಸಿ ಪ್ರಾರ್ಥನೆ ಮಾಡುತ್ತೇನೆ, ಕಾಂಗ್ರೆಸ್ ಗೆ ಅವಕಾಶ ಕೊಡಿ, ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಎಲ್ಲರ ಪರವಾದ ಸರ್ಕಾರವಾಗುತ್ತದೆ ಎಂದರು.

4 ಕೋಟಿ 30 ಲಕ್ಷ ಜನರಿಗೆ ನನ್ನ ಅಧಿಕಾರಾವಧಿಯಲ್ಲಿ ಅನ್ನಭಾಗ್ಯದಿಂದ ಪ್ರಯೋಜನವಾಗಿದೆ, ಕೋವಿಡ್ ಸಮಯದಲ್ಲಿ ಅನ್ನಭಾಗ್ಯದಿಂದ ಜನರಿಗೆ ಬಹಳ ಉಪಯೋಗವಾಗಿದೆ. ನಾನು ಅಧಿಕಾರಕ್ಕೆ ಬರುವುದು ಮುಖ್ಯ ಅಲ್ಲ, ರಾಜ್ಯ ಉಳಿಸಲು ಬಿಜೆಪಿಯನ್ನು ಅಧಿಕಾರದಿಂದ ತೊಲಗಿಸಬೇಕು ಎಂದರು.

ಬಿಜೆಪಿ ಮುಖ್ಯಮಂತ್ರಿಗಳು ಒಂದು ರೂಪಾಯಿ ಮನ್ನ ಮಾಡಿರಲಿಲ್ಲ, ನಾನು 5 ವರ್ಷದಲ್ಲಿ ನೇಕಾರರು, ರೈತರ ಸಾಲ ಮನ್ನಾ ಮಾಡಿದ್ದೆ ಎಂದು ಜನರ ಮುಂದೆ ಸಿದ್ದರಾಮಯ್ಯ ಸಾರಿದ್ದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12790
NewsKannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು