News Karnataka Kannada
Monday, May 20 2024
ಬೆಳಗಾವಿ

ಕಾಂಗ್ರೆಸ್‌ ಮುಕ್ತ ಮಾಡಲು ಬಿಜೆಪಿಯವರಿಂದ ಸಾಧ್ಯವಿಲ್ಲ; ಸತೀಶ್‌ ಜಾರಕಿಹೊಳಿ

Satish Jarkiholi says party is not organising 'Siddharamotsavam'
Photo Credit :

ಬೆಳಗಾವಿ : ಕಾಂಗ್ರೆಸ್ ನಲ್ಲಿ ಬದಲಾವಣೆಗೆ ಹಾಗೂ ಹೆಚ್ಚು ಸಂಘಟಿತಗೊಳಿಸಲು ಈ ಪಂಚರಾಜ್ಯಗಳ ಚುನಾವಣೆ ಒಂದು ಪಾಠವಾಗಿದೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ, ಶಾಸಕ ಸತೀಶ್‌ ಜಾರಕಿಹೊಳಿ ಹೇಳಿದರು.

ಬೆಳಗಾವಿಯ ಕಾಂಗ್ರೆಸ್ ಭವನದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬಿಜೆಪಿಯವರು ಎಲ್ಲೆಡೆ ಕಾಂಗ್ರೆಸ್‌ ಮುಕ್ತ ಕರ್ನಾಟಕವಾಗಲಿದೆ ಎಂದು ಸುಳ್ಳು ಪ್ರಚಾರ ಮಾಡುತ್ತಿದ್ದಾರೆ.

ಅದು ಅವರು ಕಾಣುತ್ತಿರುವ ಹಗಲು ಕನಸು. ಎಂದೆಂದಿಗೂ ಕಾಂಗ್ರೆಸ್‌ ಮುಕ್ತ ಮಾಡಲು ಅವರಿಂದ ಸಾಧ್ಯವಿಲ್ಲ ಎಂದು ತಿರುಗೇಟು ನೀಡಿದರು. ಗೋವಾದಲ್ಲಿ ಮತಗಳು ವಿಭಜನೆಯಾಗಿದ್ದರಿಂದ ನಮ್ಮ ಪಕ್ಷಕ್ಕೆ ತೊಂದರೆಯಾಗಿದೆ ವಿನಃ ಯಾವ ದೊಡ್ಡ ಮಟ್ಟದಲ್ಲಿ ನಾವೇನು ಸೋತಿಲ್ಲ ಎಂದರು.

ಗೋವಾದಲ್ಲಿ ಹಾಗೂ ಉತ್ತರ ಪ್ರದೇಶದಲ್ಲಿ ಮತಗಳು ವಿಭಜನೆಯಾಗಿದ್ದರಿಂದ ನಾವು ಸೋತಿದ್ದೇವೆ. ಗೋವಾದಲ್ಲಿ ನಮ್ಮ ವೋಟ್‌ ಬ್ಯಾಂಕ್‌ ಶೇ 32ರಷ್ಟಿದ್ದು, ಅದರಲ್ಲಿ ಕೇವಲ ಶೇ. 2ರಷ್ಟು ಮಾತ್ರ ಕಡಿಮೆಯಾಗಿದೆ. ಹೊರತು ಅಷ್ಟು ದೊಡ್ಡಮಟ್ಟದಲ್ಲಿ ಮತ ಕಳೆದುಕೊಂಡಿಲ್ಲ.ಮುಂದಿನ ದಿನಗಳಲ್ಲಿ ನಮ್ಮ ಪಕ್ಷ ಸಂಘಟಿಸಿ ರಾಜ್ಯದಲ್ಲಿ ಅಧಿಕಾರ ತರಲು ಶ್ರಮಿಸಲಾಗುವುದು ಎಂದರು.

ಕರ್ನಾಟಕದಲ್ಲಿ ನಾವು ಪಕ್ಷದ ಆಧಾರದ ಮೇಲೆ ಚುನಾವಣೆ ಮಾಡಲಾಗುತ್ತದೆ ಹೊರತು ನಾಯಕತ್ವದ ಮೇಲಲ್ಲ, ನಮ್ಮದು ಪಕ್ಷಾಧಾರಿತ. ಬೇರೆ ರಾಜ್ಯಗಳ ಫಲಿತಾಂಶ ನಮ್ಮ ರಾಜ್ಯಕ್ಕೆ ಹೋಲಿಸಲು ಸಾಧ್ಯವಿಲ್ಲ. ನಮ್ಮಲ್ಲಿ ಡಿಫಿರೆಂಟ್‌ ಚುನಾವಣೆ ನಡೆಯುತ್ತದೆ ಎಂದರು.

ಬಿಜೆಪಿಯವರು ಒಮ್ಮೆಲೇ ಮೇಲೆ ಬಂದಿಲ್ಲ. ಅವರು ಸಹ 100 ವರ್ಷಗಳ ಕಾಲ ಹಂತ ಹಂತವಾಗಿ ಕಳೆದ ನಂತರ ಅಧಿಕಾರಕ್ಕೆ ಬಂದಿದ್ದಾರೆ. ನಮಗೆ ಈಗ ಸೋಲಾಗಿರಬಹುದು. ಮತ್ತೆ ನಾವು ಕೂಡಾ ಹಂತ ಹಂತವಾಗಿ ಜನರ ವಿಶ್ವಾಸ ಗೆದ್ದು ಕಾಂಗ್ರೆಸ್ ಅಧಿಕಾರಕ್ಕೆ ಬರಲು ಪ್ರಯತ್ನಿಸಲಾಗುವುದು ಎಂದು ಹೇಳಿದರು.

ಬಿಜೆಪಿ ದೇಶದಲ್ಲಿರುವ ಜನರಿಗೆ ಸುಳ್ಳುಗಳನ್ನು ಹೇಳುತ್ತಾ ಅಧಿಕಾರಿಕ್ಕೆ ಬಂದಿದ್ದಾರೆ. ಆದರೆ ನಮ್ಮ ಪಕ್ಷ ಸತ್ಯ ಹೇಳಿ ಬರುವ ಚುನಾವಣೆಗಳಲ್ಲಿ ಬದಲಾವಣೆ ಮಾಡಲು ಪ್ರಯತ್ನಿಸಲಾಗುವುದು ಎಂದರು. ಈ ವೇಳೆ ಮಾಜಿ ಸಚಿವ ಸುದರ್ಶನ್ ವಿಧಾನ ಪರಿಷತ್ ಸದಸ್ಯ ಚನ್ನರಾಜ್ ಹಟ್ಟಿಹೊಳಿ ಹಾಜರಿದ್ದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

12790
NewsKannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು