News Karnataka Kannada
Monday, April 29 2024
ಬೆಳಗಾವಿ

ಕಾಲೇಜು ಬಸ್ ಹಾಗೂ ಸರ್ಕಾರಿ ಬಸ್ ನಡುವೆ ಅಪಘಾತ: 16 ಮಂದಿಗೆ ಗಾಯ

ಚಿತ್ರದುರ್ಗದ ತಿರುಮಲ ಡಾಬಾ ಬಳಿ ಕಾರು-ಲಾರಿ ಮಧ್ಯೆ ಅಪಘಾತ ಸಂಭವಿಸಿ ಕೃಷಿ ಇಲಾಖೆ ನೌಕರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಡೆದಿದೆ.
Photo Credit :

ಮೂಡಲಗಿ: ಪಟ್ಟಣದ ಖಾಸಗಿ ಕಾಲೇಜಿನ ಬಸ್ ಹಾಗೂ ಸರ್ಕಾರಿ ಬಸ್ ನಡುವೆ ಢಿಕ್ಕಿಯಾಗಿ ನಾಲ್ವರು ಗಂಭೀರ ಗಾಯಗೊಂಡ ಘಟನೆ ಗುರುವಾರ ಮುಂಜಾನೆ ಮೂಡಲಗಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ಗುರುವಾರ ಬೆಳ್ಳಗೆ ಎಂದಿನಂತೆ ಕಾಲೇಜು ವಿದ್ಯಾರ್ಥಿಗಳನ್ನು ಕರೆದುಕೊಂಡು ಹೋಗಲು ಜತ-ಜಾಂಬೋಟಿ ರಾಜ್ಯ ಹೆದ್ದಾರಿಯ ಗುರ್ಲಾಪುರ ಹತ್ತಿರ ಹಾರೂಗೇರಿ ಕ್ರಾಸ್ ಬಳಿ ಬಸ್‌ ನಿಂತ್ತಿತ್ತು.

ಅಥಣಿಯಿಂದ ಶಿವಮೊಗ್ಗಕ್ಕೆ ತೆರಳುತ್ತಿದ್ದ ಸರ್ಕಾರಿ ಬಸ್ ಚಾಲಕನ ನಿಯಂತ್ರಣ ತಪ್ಪಿ ಕಾಲೇಜು ಬಸ್‌ಗೆ ಢಿಕ್ಕಿ ಹೊಡೆದಿದೆ. ಢಿಕ್ಕಿಯ ಪರಿಣಾಮ ಸರ್ಕಾರಿ ಬಸ್ಸಿನಲ್ಲಿದ್ದ 11 ಜನರಿಗೆ ಹಾಗೂ ಕಾಲೇಜಿನ ಬಸ್ಸಿನಲ್ಲಿದ್ದ 5 ವಿದ್ಯಾರ್ಥಿಗಳು ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಮೂಡಲಗಿ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಗಂಭೀರ ಗಾಯಗೊಂಡ ನಾಲ್ವರನ್ನು ಪಟ್ಟಣದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಸರ್ಕಾರಿ ಬಸ್ ಢಿಕ್ಕಿಯಾದ ರಭಸಕ್ಕೆ ಕಾಲೇಜು ಬಸ್ ಪಕ್ಕದ ಗದ್ದೆಗೆ ನುಗ್ಗಿದ್ದು, ಬಸ್ಸಿನಲ್ಲಿ ಸುಮಾರು 40 ವಿದ್ಯಾರ್ಥಿಗಳು ಅದೃಷ್ಠವಶ ಯಾವುದೇ ಪ್ರಾಣ ಹಾನಿಯಾಗಿಲ್ಲ.

ಘಟನಾ ಸ್ಥಳಕ್ಕೆ ಮೂಡಲಗಿ ಪಿಎಸ್‌ಐ ಎಚ್ ವೈ ಬಾಲದಂಡಿ ಹಾಗೂ ಸಿಬ್ಬಂದಿಗಳು ಭೇಟಿ ನೀಡಿ ಪ್ರಕರಣವನ್ನು ದಾಖಲಿಸಿಕೊಂಡಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12790
NewsKannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು