News Karnataka Kannada
Monday, April 29 2024
ಬೆಳಗಾವಿ

ಕೊಲ್ಹಾಪುರದಲ್ಲಿ ಕನ್ನಡ ಬಾವುಟವನ್ನು ಸುಟ್ಟ ಶಿವಸೇನಾ ಕಾರ್ಯಕರ್ತರು

Karnataka Flag
Photo Credit :

ಬೆಳಗಾವಿ : ಮಹಾರಾಷ್ಟ್ರದ ‌ಕೊಲ್ಹಾಪುರದಲ್ಲಿ ಶಿವಸೇನಾ ಕಾರ್ಯಕರ್ತರು ಕರ್ನಾಟಕ ಸರ್ಕಾರದ ವಿರುದ್ಧ ಧಿಕ್ಕಾರ ಕೂಗಿ, ಕನ್ನಡ ಬಾವುಟವನ್ನು ಮಂಗಳವಾರ ಸುಟ್ಟು ಹಾಕಿದ್ದಾರೆ. ಈ ಘಟನೆಯ ವಿಡಿಯೊ ಹಾಗೂ ಫೋಟೊಗಳು ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡುತ್ತಿವೆ.

ವಿಧಾನಮಂಡಲ‌ ಚಳಿಗಾಲದ ಅಧಿವೇಶನಕ್ಕೆ ಪರ್ಯಾಯವಾಗಿ ಮಹಾರಾಷ್ಟ್ರ ಏಕೀಕರಣ ಸಮಿತಿಯವರು (ಎಂಇಎಸ್) ಇಲ್ಲಿ ಹಮ್ಮಿಕೊಂಡಿದ್ದ ‘ಮಹಾಮೇಳಾವ’ ಸಂದರ್ಭದಲ್ಲಿ, ಆ ಸಂಘಟನೆಯ ಅಧ್ಯಕ್ಷ ದೀಪಕ ದಳವಿ ಅವರಿಗೆ ಕನ್ನಡಪರ ಹೋರಾಟಗಾರ ಸಂಪತ್‌ಕುಮಾರ್‌ ದೇಸಾಯಿ ಮಸಿ‌ ಬಳಿದಿದ್ದನ್ನು ಖಂಡಿಸಿ ಪ್ರತಿಭಟನೆ ನಡೆಸಿದ ಶಿವಸೇನಾ ಕಾರ್ಯಕರ್ತರು ಕನ್ನಡ ಬಾವುಟವನ್ನು ಸುಟ್ಟು ಹಾಕಿದ್ದಾರೆ. ಕರ್ನಾಟಕದ ವಿರುದ್ಧ ಕ್ರಮ ಜರುಗಿಸಬೇಕು ಮತ್ತು ಗಡಿ ವಿವಾದವನ್ನು ಕೂಡಲೇ ಬಗೆಹರಿಸ ಬೇಕು ಎಂದು ಒತ್ತಾಯಿಸಿದ್ದಾರೆ.

ಈ ಕುರಿತು ಬುಧವಾರ ಪ್ರತಿಕ್ರಿಯಿಸಿದ ಗೃಹ ಸಚಿವ ಆರಗ ಜ್ಞಾನೇಂದ್ರ, ‘ಮಹಾರಾಷ್ಟ್ರದಲ್ಲಿ ಶಿವಸೇನಾ ಕಾರ್ಯಕರ್ತರು ಕನ್ನಡ ಧ್ವಜ ಸುಟ್ಟಿದ್ದು ಸರಿಯಲ್ಲ’ ಎಂದರು.

‘ಗಡಿಯಲ್ಲಿ ಕನ್ನಡಿಗರು-ಮರಾಠಿಗರು ಒಂದಾಗಿ ಬದುಕು ನಡೆಸುತ್ತಿದ್ದಾರೆ. ಇಲ್ಲಿ ಗದ್ದಲ ಸೃಷ್ಟಿಸಿ, ಶಾಂತಿ ಕದಡಲು ಯತ್ನಿಸುವವರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು’ ಎಂದು ಎಚ್ಚರಿಕೆ ನೀಡಿದರು.

‘ಎಂಇಎಸ್ ಮುಖಂಡ ದೀಪಕ‌ ದಳವಿ ಅವರಿಗೆ ಮಸಿ ಬಳಿದ ಪ್ರಕರಣ ಸಂಬಂಧ ಕನ್ನಡ ಹೋರಾಟಗಾರನ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ಅನುಮತಿ ಪಡೆಯದಿದ್ದರೂ ಎಂಇಎಸ್ ಮುಖಂಡರು ಮಹಾಮೇಳಾವ ನಡೆಸಿದ್ದು, ಈ ಕುರಿತು ಪೊಲೀಸ್ ಅಧಿಕಾರಿಗಳಿಂದ ಮಾಹಿತಿ ಪಡೆಯುತ್ತೇನೆ. ಪರಿಶೀಲಿಸಿ, ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು’ ಎಂದರು.

ಈ ನಡುವೆ, ಎಂಇಎಸ್ ಅಧ್ಯಕ್ಷಗೆ ಮಸಿ ಬಳಿದ ವ್ಯಕ್ತಿಯ ವಿರುದ್ಧ ದಾಖಲಿಸಿರುವ ಕೊಲೆ ಯತ್ನ ಪ್ರಕರಣ ವಾಪಸ್ ಪಡೆಯುವಂತೆ ಸಾಮಾಜಿಕ ಜಾಲತಾಣಗಳಲ್ಲಿ ಒತ್ತಾಯಿಸಲಾಗುತ್ತಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12790
NewsKannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು