ಬೆಳಗಾವಿ : ಗೃಹ ಸಚಿವ ಆರಗ ಜ್ಞಾನೇಂದ್ರ , ಬೆಳಗಾವಿ ಅಧಿವೇಶನದಲ್ಲಿ ಭಾಗವಹಿಸುತ್ತಿದ್ದು, ಅದಕ್ಕೆ ಪೂರ್ವಭಾವಿಯಾಗಿ, ಹಿರಿಯ ಪೊಲೀಸ್ ಅಧಿಕಾರಿಗಳೊಂದಿಗೆ ಇಂದು ಬೆಳಗ್ಗೆ, ಸಭೆ ನಡೆಸಿದರು.
ಬೆಳಗಾವಿಯಲ್ಲಿ ನಡೆಯುತ್ತಿರುವ ಚಳಿಗಾಲದ, ಅಧಿವೇಶನ ಸಂದರ್ಭದಲ್ಲಿ ಯಾವುದೇ ಅಹಿತಕರ ಘಟನೆಗಳಿಗೆ, ಅವಕಾಶವಿಲ್ಲದಂತೆ, ಸುಲಲಿತವಾಗಿ ನಡೆಯಲು, ತೆಗೆದುಕೊಂಡಿರುವ ರಕ್ಷಣಾ ಕ್ರಮಗಳ ಬಗ್ಗೆ, ಸಚಿವರು ಪರಿಚಯ ಪಡೆದುಕೊಂಡರು.
ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಒಳಾಡಳಿತ, ಶ್ರೀ ರಜನೀಶ್ ಗೋಯಲ್, ಎಡಿಜಿಪಿ ಕಾನೂನು ಮತ್ತು ಸುವ್ಯವಸ್ಥೆ, ಶ್ರೀ ಪ್ರತಾಪ್ ರೆಡ್ಡಿ, ಶ್ರೀ ಸತೀಶ್ ಕುಮಾರ್, ಐಜಿ ಬೆಳಗಾವಿ ವೃತ್ತ ಹಾಗೂ ಬೆಳಗಾವಿ ಪೊಲೀಸ್ ಆಯುಕ್ತ ತ್ಯಾಗರಾಜ್ ಶ್ರೀ ಅವರೂ ಉಪಸ್ಥಿತರಿದ್ದರು.