News Karnataka Kannada
Saturday, May 04 2024
ಬೆಳಗಾವಿ

ಬೆಳಗಾವಿ: ಪತಿಯ ಹಿಂಸೆ ತಾಳಲಾರದೆ ಮಗನೊಂದಿಗೆ ಕೆರೆಗೆ ಹಾರಿದ ತಾಯಿ

15 missing after tractor trolley falls into river in UP
Photo Credit : IANS

ಬೆಳಗಾವಿ : ಬುದ್ಧಿಮಾಂದ್ಯ ಮಕ್ಕಳು ಹುಟ್ಟಿದ್ದಾರೆ ಎಂಬ ಕಾರಣಕ್ಕೆ ಪತಿ ನೀಡುತ್ತಿದ್ದ ಹಿಂಸೆ ತಾಳಲಾರದೆ ಪತ್ನಿಯು ಮಗನೊಂದಿಗೆ ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಪ್ರಕರಣ ವರದಿಯಾಗಿದೆ. ಬೆಳಗಾವಿ ಜಿಲ್ಲೆಯ ಯರಗಟ್ಟಿ ತಾಲೂಕಿನ ಬೊಳಕಡಬಿ ಗ್ರಾಮದಲ್ಲಿ ಈ ಘಟನೆ ನಡೆದಿದೆ.

ಸೇವಂತಿ ಪ್ಯಾಟಿ (32), ಮಹಾಂತೇಶ್ ಪ್ಯಾಟಿ(12) ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ತಾಯಿ-ಮಗ. ಆತ್ಮಹತ್ಯೆಗೆ ಪತಿ ಬೆಳ್ಳಪ್ಪನ ಕಿರುಕುಳ ಕಾರಣ ಎನ್ನಲಾಗಿದ್ದು, ಆತನ ವಿರುದ್ಧ ಕೊಲೆ ಆರೋಪವೂ ಕೇಳಿಬಂದಿದೆ.

ಬುದ್ಧಿಮಾಂದ್ಯ ಮಕ್ಕಳು ಹುಟ್ಟಿದ್ದಕ್ಕೆ ಗಂಡನಿಂದ ನಿತ್ಯವೂ ಹಿಂಸೆ ಅನುಭವಿಸುತ್ತಿದ್ದ ಪತ್ನಿ ಸೇವಂತಿ, ಒಂದು ಮಗುವನ್ನು ವರ್ಷದ ಹಿಂದೆ ತವರು ಮನೆಯಲ್ಲಿ ಬಿಟ್ಟಿದ್ದು, ಇನ್ನೊಬ್ಬ ಮಗನನ್ನು ತನ್ನೊಂದಿಗೆ ಇರಿಸಿಕೊಂಡಿದ್ದಳು. ಎಂದಿನಂತೆ ಗಲಾಟೆ ಮಾಡಿದ್ದ ಪತಿ, ನಿನ್ನೆಯೂ ಹೆಂಡತಿ-ಮಗನ ಮೇಲೆ ಹಲ್ಲೆ ಮಾಡಿದ್ದ. ಮಾತ್ರವಲ್ಲ, ಬೇರೆ ಮದುವೆ ಆಗುತ್ತೇನೆ ಎಂಬುದಾಗಿಯೂ ಕಿರುಕುಳ ನೀಡುತ್ತಿದ್ದ. ಇದರಿಂದ ಬೇಸತ್ತ ಸೇವಂತಿ, ಮಗನೊಂದಿಗೆ ಗ್ರಾಮದ ಹೊರವಲಯದ ಕೆರೆಗೆ ಹಾರಿದ್ದಳು.

ಇಂದು ಬೆಳಗ್ಗೆ ಆತ್ಮಹತ್ಯೆ ವಿಚಾರ ಬಹಿರಂಗಗೊಂಡಿದ್ದು, ಸ್ಥಳಕ್ಕೆ ಅಗ್ನಿಶಾಮಕ ಸಿಬ್ಬಂದಿ, ಪೊಲೀಸರ ಭೇಟಿ ನೀಡಿದ್ದಾರೆ. ಇಬ್ಬರ ಶವಗಳನ್ನು ಹೊರತೆಗೆಯಲಾಗಿದ್ದು, ಪೊಲೀಸರು ತನಿಖೆ ಕೈಗೆತ್ತಿಕೊಂಡಿದ್ದಾರೆ. ಮತ್ತೊಂದೆಡೆ ಪತಿಯೇ ಕೊಲೆ ಮಾಡಿ ಪರಾರಿಯಾಗಿದ್ದಾನೆ ಎಂದು ಸೇವಂತಿಯ ಕುಟುಂಬಸ್ಥರು ಆರೋಪಿಸಿದ್ದಾರೆ. ಮುರಗೋಡ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12790
NewsKannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು