News Karnataka Kannada
Friday, May 03 2024
ಬೆಳಗಾವಿ

ಬೆಳೆ ಹಾನಿ ಫಲಾನುಭವಿಗಳಿಗೆ ಡಿಸೆಂಬರ್ ಅಂತ್ಯದೊಳಗೆ ಪರಿಹಾರ ಪಾವತಿ: ಆರ್.ಅಶೋಕ್

R Ashok
Photo Credit :

ಬೆಳಗಾವಿ,ಡಿ.20 : ಬೆಳೆ ಹಾನಿಯಾಗಿರುವ ಫಲಾನುಭವಿಗಳಿಗೆ ಡಿಸೆಂಬರ್ ಅಂತ್ಯದೊಳಗೆ ಪರಿಹಾರ ಪಾವತಿಸಲು ಸೂಚಿಸಲಾಗಿದೆ ಎಂದು ಕಂದಾಯ ಸಚಿವ ಆರ್.ಅಶೋಕ್ ತಿಳಿಸಿದರು.

ವಿಧಾನಸಭೆಯ ಪ್ರಶ್ನೋತ್ತರ ವೇಳೆಯಲ್ಲಿ ಶಾಸಕ ದೊಡ್ಡಗೌಡರ ಮಹಾಂತೇಶ್ ಬಸವಂತರಾಯ ಅವರ ಪ್ರಶ್ನೆಗೆ ಉತ್ತರಿಸಿದ ಸಚಿವರು, ಮನೆ ಹಾನಿಯಾಗಿರುವ ಫಲಾನುಭವಿಗಳಿಗೆ ನಿಯಮಾನುಸಾರ ಪರಿಶೀಲಿಸಿ ಜ.15ರೊಳಗೆ ಪರಿಹಾರ ನೀಡಲು ಕಾಲಮಿತಿ ನೀಡಲಾಗಿದೆ ಎಂದರು.

ಸರ್ಕಾರದಿಂದ ಎ ಮತ್ತು ಬಿ ವರ್ಗದ ಮನೆ ಹಾನಿಗೆ ಮೊದಲ ಕಂತಿನಲ್ಲಿ 95,100ರೂ., ಬಿ ವರ್ಗದ ಮನೆ ಹಾನಿಗೆ ಒಂದೇ ಕಂತಿನಲ್ಲಿ 50 ಸಾವಿರ ರೂ. ಹಣ ಪಾವತಿಸಲು ಅನುದಾನ ಬಿಡುಗಡೆಯಾಗಿದೆ ಎಂದು ತಿಳಿಸಿದರು.

ಮೂಲ ಸೌಕರ್ಯಗಳ ತುರ್ತು ದುರಸ್ತಿಗಾಗಿ ಲೋಕೋಪಯೋಗಿ, ಗ್ರಾಮೀಣಾಭಿವೃದ್ದಿ, ನಗರಾಭಿವೃದ್ಧಿ, ಜಲ ಸಂಪನ್ಮೂಲ ಇಲಾಖೆ ಅಡಿಯಲ್ಲಿ ಲಭ್ಯವಿರುವ ಅನುದಾನಕ್ಕೆ ಅನುಗುಣವಾಗಿ ಕಾಮಗಾರಿ ಕೈಗೆತ್ತಿಕೊಳ್ಳಲು ಸೂಚಿಸಲಾಗಿದೆ ಎಂದರು.

ಕಿತ್ತೂರು ತಾಲ್ಲೂಕಿನಲ್ಲಿ ಬೆಳೆ ಹಾನಿಯಾಗಿಯಾದ 877 ಅರ್ಹ ಫಲಾನುಭವಿಗಳಿಗೆ 26.79 ಲಕ್ಷ ರೂ., ಬೈಲಹೊಂಗಲ ತಾಲ್ಲೂಕಿನಲ್ಲಿ 5147 ಫಲಾನುಭವಿಗಳಿಗೆ 567 ಲಕ್ಷ ರೂ.ಗಳನ್ನು ಈಗಾಗಲೇ ಪಾವತಿಸಲಾಗಿದೆ ಎಂದು ಸದನದಲ್ಲಿ ಮಾಹಿತಿ ನೀಡಿದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12790
NewsKannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು