News Karnataka Kannada
Wednesday, May 01 2024
ಬೆಳಗಾವಿ

ಮಹಾರಾಷ್ಟ್ರದಲ್ಲಿ ಶಿವಸೇನೆ ಪುಂಡರು ಅಟ್ಟಹಾಸ: ಕರ್ನಾಟಕದ ಕಾರುಗಳ ಮೇಲೆ ಕಲ್ಲು ತೂರಾಟ

Latest News
Photo Credit :

ಸಾಂಗ್ಲಿ : ಬೆಳಗಾವಿಯಲ್ಲಿ ಸಂಗೊಳ್ಳಿ ರಾಯಣ್ಣ ಪ್ರತಿಮೆ ವಿರೂಪಗೊಳಿಸಿದ ಕಿಡಿಗೇಡಿಗಳ ವಿರುದ್ಧ ರಾಜ್ಯಾದ್ಯಂತ ಪ್ರತಿಭಟನೆಗಳು ನಡೆಯುತ್ತಿರುವ ಬೆನ್ನಲ್ಲೇ ಮಹಾರಾಷ್ಟ್ರದಲ್ಲಿ ಶಿವಸೇನೆ ಪುಂಡರು ಅಟ್ಟಹಾಸ ನಡೆಸಿದ್ದು, ಕರ್ನಾಟಕದ ಕಾರುಗಳ ಮೇಲೆ ಕಲ್ಲು ತೂರಿರುವ ಘಟನೆ ನಡೆದಿದೆ.

ಮಹಾರಾಷ್ಟ್ರದ ಸಾಂಗ್ಲಿ ಜಿಲ್ಲೆಯ ಮಿರಜ್ ನಲ್ಲಿ ಶಿವಸೇನೆ ಕಾರ್ಯಕರ್ತರು ಕರ್ನಾಟಕದ ಕಾರುಗಳ ಮೇಲೆ ಕಟ್ಟಿಗೆಯಿಂದ ಹೊಡೆದು, ಕಲ್ಲು ತೂರಿದ್ದಾರೆ. ಕನ್ನಡಿಗರ ಹೋಟೆಲ್ ಬಂದ್ ಮಾಡಿಸಿ ದಬ್ಬಾಳಿಕೆ ಮಾಡಿದೆ ಎಂದು ವರದಿಯಾಗಿದೆ.

ಬೆಳಗಾವಿಯಲ್ಲೂ ಶಿವಸೇನೆ, ಎಂಇಎಸ್ ಕಾರ್ಯಕರ್ತರು ಪುಂಡಾಟ ಮೆರೆದಿದ್ದು, ಬೆಳಗಾವಿಯ ಹೋಟೆಲ್ ಗಳ ಮೇಲೆ ದಾಳಿ ಮಾಡಿದ್ದಾರೆ. ಕನ್ನಡ ನಾಮಫಲಕಗಳನ್ನು ಹರಿದು ಹಾಕಿ ಕಲ್ಲು ತೂರಾಟ ನಡೆಸಿದ್ದಾರೆ. ಕಲ್ಲು ತೂರಿರುವ ಕೃತ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12790
NewsKannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು