News Karnataka Kannada
Monday, April 29 2024
ಬೆಳಗಾವಿ

ರಾಜ್ಯದಲ್ಲಿ ನಿರುದ್ಯೋಗ ಸಮಸ್ಯೆ ಸರಿ ಮಾಡಲು ಶೀಘ್ರವೇ ಉದ್ಯೋಗ ನೀತಿ ಜಾರಿ: ಸಿಎಂ

Basavaraj Bommaih V Ponnuraj 01082021
Photo Credit :

ಬೆಳಗಾವಿ : ರಾಜ್ಯದಲ್ಲಿ ನಿರುದ್ಯೋಗ ಸಮಸ್ಯೆ ತೊಲಗಿಸುವ ನಿಟ್ಟಿನಲ್ಲಿ ಶೀಘ್ರದಲ್ಲಿಯೇ ಉದ್ಯೋಗ ನೀತಿ ಜಾರಿಗೊಳಿಸಲಾಗುವುದು ಎಂದು ಸಿಎಂ ಬಸವರಾಜ್ ಬೊಮ್ಮಾಯಿ ಹೇಳಿದ್ದಾರೆ.

ಜಿಲ್ಲೆಯ ಗೋಗಟೆಯಲ್ಲಿನ ಎಂಜಿನಿಯರಿಂಗ್ ಕಾಲೇಜಿನಲ್ಲಿ ನಡೆದಿದ್ದ ಉದ್ಯೋಗ ಮೇಳ ಉದ್ಘಾಟಿಸಿ ಮಾತನಾಡಿದ ಅವರು, ಉದ್ಯೋಗ ನೀತಿಯ ಮೂಲಕ ಯುವ ಪೀಳಿಗೆಯ ಸಮಸ್ಯೆಯಾಗಿರುವ ನಿರುದ್ಯೋಗಕ್ಕೆ ಮುಕ್ತಿ ಕಾಣಿಸುತ್ತೇವೆ ಎಂದು ಹೇಳಿದ್ದಾರೆ.

ಈ ಸಂದರ್ಭದಲ್ಲಿ ಮಾತನಾಡಿರುವ ಸಚಿವ ಅಶ್ವತ್ಥ್ ನಾರಾಯಣ್, ರಾಜ್ಯದಲ್ಲಿನ ಪ್ರತಿಯೊಬ್ಬ ವಿದ್ಯಾವಂತರಿಗೂ ಉದ್ಯೋಗ ಸಿಗುವ ನಿಟ್ಟಿನಲ್ಲಿಯೇ ಸಕಲರಿಗೂ ಉದ್ಯೋಗ ಕಾರ್ಯಕ್ರಮ ರೂಪಿಸಲಾಗಿದೆ ಎಂದು ಹೇಳಿದ್ದಾರೆ.

ಈ ಉದ್ಯೋಗ ಮೇಳದಲ್ಲಿ ಹಲವು ಜಿಲ್ಲೆಗಳ ಅಭ್ಯರ್ಥಿಗಳು ಭಾಗವಹಿಸಿದ್ದರು. 14 ಕಂಪನಿಗಳು ಭಾಗವಹಿಸಿದ್ದವು. ಈ ಸಂದರ್ಭದಲ್ಲಿ ಮಹೀಂದ್ರಾ ಆಂಡ್ ಮಹಿಂದ್ರಾ, ನಂದಿ ಫೌಂಡೇಶನ್ 31 ಸಾವಿರ ನಿರುದ್ಯೋಗಿಗಳಿಗೆ ಉದ್ಯೋಗ ನೀಡುವ ಭರವಸೆ ನೀಡಿತು. ಅಲ್ಲದೇ, ಒಡಂಬಡಿಕೆಗೆ ಸಹಿ ಹಾಕಿತು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12790
NewsKannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು