News Karnataka Kannada
Monday, April 29 2024
ಬೆಳಗಾವಿ

ವಿಧಾನಸಭೆಯಲ್ಲಿಂದು ವಾಯುಪಡೆಯ ಗ್ರೂಪ್ ಕ್ಯಾಪ್ಟನ್ ವರುಣ್ ಸಿಂಗ್ ಗೆ ಶ್ರದ್ದಾಂಜಲಿ

New Project 2021 12 15t132135.778
Photo Credit :

ಬೆಳಗಾವಿ,ಡಿ.16 : ತಮಿಳುನಾಡಿನ ಕನೂರು ಬಳಿ ಹೆಲಿಕಾಪ್ಟರ್ ದುರಂತ ದಲ್ಲಿ ಸಾವು ಬದುಕಿನ ನಡುವೆ ಹೋರಾಟ ನಡೆಸಿ ನಿನ್ನೆ ನಿಧನರಾದ ಭಾರತೀಯ ವಾಯುಪಡೆಯ ಗ್ರೂಪ್ ಕ್ಯಾಪ್ಟನ್ ವರುಣ್ ಸಿಂಗ್ ಅವರಿಗೆ ವಿಧಾನಸಭೆಯಲ್ಲಿಂದು ಭಾವಪೂರ್ಣ ಶ್ರದ್ದಾಂಜಲಿ ಸಲ್ಲಿಸಲಾಯಿತು.

ಬೆಳಗ್ಗೆ ವಿಧಾನಸಭೆಯ ಕಲಾಪ ಆರಂಭವಾಗುತ್ತಿದ್ದಂತೆ ಸಭಾಧ್ಯಕ್ಷರಾದ ವಿಶ್ವೇಶ್ವರ ಹೆಗಡೆ ಕಾಗೇರಿ ಅವರು ಸಂತಾಪ ನಿರ್ಣಯವನ್ನು ಮಂಡಿಸಿದರು.

ನಿರ್ಣಯದ ಪರವಾಗಿ ಮಾತನಾಡಿದ ಕಾಗೇರಿ, ಭಾರತೀಯ ವಾಯುಪಡೆಯ ಗ್ರೂಪ್ ಕ್ಯಾಪ್ಟನ್ ಆಗಿದ್ದ ವರುಣ್ ಸಿಂಗ್ ಅವರು ದಕ್ಷ ಮತ್ತು ಅತ್ಯಂತ ಪ್ರಾಮಾಣಿಕತೆಯಿಂದ ಸೇವೆ ಸಲ್ಲಿಸಿದ್ದರು.

2014ರಲ್ಲಿ ರಾಷ್ಟ್ರೀಯ ರಕ್ಷಣಾ ಅಕಾಡೆಮಿಗೆ ಸೇರ್ಪಡೆಯಾದ ಅವರು, ಸೇವೆಯುದ್ದಕ್ಕೂ ಪ್ರಾಮಾಣಿಕತೆ ಮೆರೆದವರು. ಸುಮಾರು 10 ಸಾವಿರ ಅಡಿ ಎತ್ತರದಲ್ಲಿ ಎಲ್‍ಸಿಎ ಹೆಲಿಕಾಪ್ಟರ್ ಹಾರಾಟ ನಡೆಸುತ್ತಿದ್ದಾಗ ತಾಂತ್ರಿಕ ತೊಂದರೆಗೊಳಗಾಗಿತ್ತು. ಆ ಸಂದರ್ಭದಲ್ಲಿ ಅವರು ಧೃತಿಗೆಡದೆ ಹೆಲಿಕಾಪ್ಟರ್‍ನ್ನು ಯಶಸ್ವಿಯಾಗಿ ಕೆಳಗಿಳಿಸಿದ್ದರು.

ಅವರ ಸೇವೆಯನ್ನು ಮೆಚ್ಚಿ ಶೌರ್ಯ ಚಕ್ರ ನೀಡಲಾಗಿತ್ತು. ದೇಶವು ಒಬ್ಬ ೀರ ಯೋಧನನ್ನು ಕಳೆದುಕೊಂಡಿದೆ ಎಂದು ಕಂಬನಿ ಮಿಡಿದರು. ಮೃತರ ಗೌರವಾರ್ಥವಾಗಿ ಸದನದಲ್ಲಿ ಸದಸ್ಯರು ಎದ್ದು ನಿಂತು ಒಂದು ನಿಮಿಷ ಮೌನ ಆಚರಿಸಿದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12790
NewsKannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು