News Karnataka Kannada
Monday, May 06 2024
ಬೆಳಗಾವಿ

ಸಂತೋಷ್ ಸಾವಿಗೆ ನ್ಯಾಯ ಕೊಡಿಸುವುದಕ್ಕಾಗಿ ಹೋರಾಡುತ್ತೇವೆ; ಸಿದ್ದರಾಮಯ್ಯ

Siddaramaiyya
Photo Credit : News Kannada

ಬೆಳಗಾವಿ : ಅಮಾನವೀಯವಾದ ಸಾವಾಗಿದೆ. ಇದಕ್ಕೆ ಸಚಿವ ಈಶ್ವರಪ್ಪ ಅವರೇ ನೇರ ಕಾರಣ ಎಂದು ಸಂತೋಷ್ ಪಾಟೀಲ ಸಂದೇಶ ಕಳುಹಿಸಿದ್ದಾರೆ ಎಂದು ವಿಧಾನಸಭೆ ವಿರೋಧಪಕ್ಷದ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ.

ಅವರ ತಾಯಿ ಹಾಗೂ ಪತ್ನಿಯೂ ಆದೇ ಮಾತು ಹೇಳಿದ್ದಾರೆ. ಅವರಿಗೆ ಶಿಕ್ಷೆ ಆಗಬೇಕು; ನಮಗೆ ನ್ಯಾಯ ಸಿಗಬೇಕು ಎಂದು ಸಂತೋಷ್ ಮನೆಗೆ ಭೇಟಿ ನೀಡಿದ ಬಳಿಕ ಸಿದ್ದರಾಮಯ್ಯ ಹೇಳಿದರು. ಅವರಿಗೆ ಸಾಂತ್ವನ ಹೇಳಿದ್ದೇವೆ. ನ್ಯಾಯ ಕೊಡಿಸುವುದಕ್ಕಾಗಿ ಹೋರಾಡುತ್ತೇವೆ’ ಎಂದರು.

‘ಸಂತೋಷ್, ಸಚಿವರು ಹೇಳದೆ ಕೆಲಸ ಮಾಡಿರುವುದಿಲ್ಲ. ಕಾರ್ಯಾದೇಶ, ಬಿಲ್‌ ಪಾವತಿಸುವಾಗ ಶೇ 40ರಷ್ಟು ಕಮಿಷನ್‌ ಕೇಳಿದ್ದಾರೆ. ಅವರು ಮಾಡಿರುವ ಕೆಲಸಕ್ಕೆ ಸಂಬಂಧಿಸಿದ ₹ 4 ಕೋಟಿಯನ್ನು ಕೂಡಲೇ ಬಿಡುಗಡೆ ಮಾಡಬೇಕು. ಏಕೆಂದರೆ, ಅವರು ಸಾಲ ಮಾಡಿ, ಚಿನ್ನ ಗಿರವಿ ಇಟ್ಟು ಕೆಲಸ ಮಾಡಿದ್ದಾರೆ’ ಎಂದು ಹೇಳಿದರು.

‘ಸಚಿವರ ಭ್ರಷ್ಟಾಚಾರದಿಂದಾಗಿ ಇಡೀ ಕುಟುಂಬ ಅನಾಥವಾಗಿದೆ’ ಎಂದರು. ‘ಸಚಿವರೇ ಕಾರಣ ಎಂದು ನೇರವಾಗಿ ಆರೋಪಿಸಿರುವುದರಿಂದ ಇದು ಕೊಲೆಯಾಗುತ್ತದೆ. ಹೀಗಾಗಿ, ಆರೋಪಿಯನ್ನು ಕೂಡಲೇ ಬಂಧಿಸಬೇಕು’ ಎಂದು ಒತ್ತಾಯಿಸಿದರು.

‘ಈಶ್ವರಪ್ಪ ಸೇರಿದಂತೆ ಎಲ್ಲ ಸಚಿವರು ರಾಕ್ಷಸಪ್ರವೃತ್ತಿಯವರಾಗಿದ್ದಾರೆ. ಪ್ರತಿ ಕಾಮಗಾರಿಗೂ ಇಂತಿಷ್ಟು ಪರ್ಸಂಟೇಜ್‌ ತೆಗೆದುಕೊಳ್ಳುತ್ತಿದ್ದಾರೆ’ ಎಂದು ಆರೋಪಿಸಿದರು. ‘ಸಂತೋಷ್ ಕುಟುಂಬಕ್ಕೆ ನ್ಯಾಯ ಕೊಡಿಸಲು ಕಾಂಗ್ರೆಸ್‌ನಿಂದ ಹೋರಾಟ ಮಾಡಲಾಗುವುದು’ ಎಂದರು. ‘ಅವರು ಬೇಜವಾಬ್ದಾರಿ ಸಚಿವ. ಭ್ರಷ್ಟಾಚಾರಿ. ಅಪರಾಧಿ ಸ್ಥಾನದಲ್ಲಿ ನಿಂತವರು ಸತ್ಯ ಹೇಳುತ್ತಾರೆಯೇ?’ ಎಂದು ಕೇಳಿದರು.

‘ತಪ್ಪುಗಳನ್ನು ಮುಚ್ಚಿಕೊಳ್ಳಲು ಬಿಜೆಪಿಯವರು ಏನೇನೋ ಆರೋಪಗಳನ್ನು ಮಾಡುತ್ತಿದ್ದಾರೆ. ಅವೆಲ್ಲವನ್ನೂ ನಂಬಲಾಗದು’ ಎಂದು ಸಿದ್ದರಾಮಯ್ಯ ತಿರುಗೇಟು ನೀಡಿದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12790
NewsKannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು