ಬೆಳಗಾವಿ : ಅಮಾನವೀಯವಾದ ಸಾವಾಗಿದೆ. ಇದಕ್ಕೆ ಸಚಿವ ಈಶ್ವರಪ್ಪ ಅವರೇ ನೇರ ಕಾರಣ ಎಂದು ಸಂತೋಷ್ ಪಾಟೀಲ ಸಂದೇಶ ಕಳುಹಿಸಿದ್ದಾರೆ ಎಂದು ವಿಧಾನಸಭೆ ವಿರೋಧಪಕ್ಷದ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ.
ಅವರ ತಾಯಿ ಹಾಗೂ ಪತ್ನಿಯೂ ಆದೇ ಮಾತು ಹೇಳಿದ್ದಾರೆ. ಅವರಿಗೆ ಶಿಕ್ಷೆ ಆಗಬೇಕು; ನಮಗೆ ನ್ಯಾಯ ಸಿಗಬೇಕು ಎಂದು ಸಂತೋಷ್ ಮನೆಗೆ ಭೇಟಿ ನೀಡಿದ ಬಳಿಕ ಸಿದ್ದರಾಮಯ್ಯ ಹೇಳಿದರು. ಅವರಿಗೆ ಸಾಂತ್ವನ ಹೇಳಿದ್ದೇವೆ. ನ್ಯಾಯ ಕೊಡಿಸುವುದಕ್ಕಾಗಿ ಹೋರಾಡುತ್ತೇವೆ’ ಎಂದರು.
‘ಸಂತೋಷ್, ಸಚಿವರು ಹೇಳದೆ ಕೆಲಸ ಮಾಡಿರುವುದಿಲ್ಲ. ಕಾರ್ಯಾದೇಶ, ಬಿಲ್ ಪಾವತಿಸುವಾಗ ಶೇ 40ರಷ್ಟು ಕಮಿಷನ್ ಕೇಳಿದ್ದಾರೆ. ಅವರು ಮಾಡಿರುವ ಕೆಲಸಕ್ಕೆ ಸಂಬಂಧಿಸಿದ ₹ 4 ಕೋಟಿಯನ್ನು ಕೂಡಲೇ ಬಿಡುಗಡೆ ಮಾಡಬೇಕು. ಏಕೆಂದರೆ, ಅವರು ಸಾಲ ಮಾಡಿ, ಚಿನ್ನ ಗಿರವಿ ಇಟ್ಟು ಕೆಲಸ ಮಾಡಿದ್ದಾರೆ’ ಎಂದು ಹೇಳಿದರು.
‘ಸಚಿವರ ಭ್ರಷ್ಟಾಚಾರದಿಂದಾಗಿ ಇಡೀ ಕುಟುಂಬ ಅನಾಥವಾಗಿದೆ’ ಎಂದರು. ‘ಸಚಿವರೇ ಕಾರಣ ಎಂದು ನೇರವಾಗಿ ಆರೋಪಿಸಿರುವುದರಿಂದ ಇದು ಕೊಲೆಯಾಗುತ್ತದೆ. ಹೀಗಾಗಿ, ಆರೋಪಿಯನ್ನು ಕೂಡಲೇ ಬಂಧಿಸಬೇಕು’ ಎಂದು ಒತ್ತಾಯಿಸಿದರು.
‘ಈಶ್ವರಪ್ಪ ಸೇರಿದಂತೆ ಎಲ್ಲ ಸಚಿವರು ರಾಕ್ಷಸಪ್ರವೃತ್ತಿಯವರಾಗಿದ್ದಾರೆ. ಪ್ರತಿ ಕಾಮಗಾರಿಗೂ ಇಂತಿಷ್ಟು ಪರ್ಸಂಟೇಜ್ ತೆಗೆದುಕೊಳ್ಳುತ್ತಿದ್ದಾರೆ’ ಎಂದು ಆರೋಪಿಸಿದರು. ‘ಸಂತೋಷ್ ಕುಟುಂಬಕ್ಕೆ ನ್ಯಾಯ ಕೊಡಿಸಲು ಕಾಂಗ್ರೆಸ್ನಿಂದ ಹೋರಾಟ ಮಾಡಲಾಗುವುದು’ ಎಂದರು. ‘ಅವರು ಬೇಜವಾಬ್ದಾರಿ ಸಚಿವ. ಭ್ರಷ್ಟಾಚಾರಿ. ಅಪರಾಧಿ ಸ್ಥಾನದಲ್ಲಿ ನಿಂತವರು ಸತ್ಯ ಹೇಳುತ್ತಾರೆಯೇ?’ ಎಂದು ಕೇಳಿದರು.
‘ತಪ್ಪುಗಳನ್ನು ಮುಚ್ಚಿಕೊಳ್ಳಲು ಬಿಜೆಪಿಯವರು ಏನೇನೋ ಆರೋಪಗಳನ್ನು ಮಾಡುತ್ತಿದ್ದಾರೆ. ಅವೆಲ್ಲವನ್ನೂ ನಂಬಲಾಗದು’ ಎಂದು ಸಿದ್ದರಾಮಯ್ಯ ತಿರುಗೇಟು ನೀಡಿದರು.
ಮೇಲಂತಬೆಟ್ಟು ಅಕ್ರಮ ಕೋರೆಗೆ ತಹಶೀಲ್ದಾರ್ ನೇತೃತ್ವದಲ್ಲಿ ದಾಳಿ ನಡೆಸಿದ್ದು, ಶಾಸಕ ಹರೀಶ್ ಪೂಂಜ ಆಪ್ತ ಬಿಜೆಪಿ ಯುವ ಮೋರ್ಚಾ ಮುಖಂಡ…
ರಾಯಲ್ ಚಾಲೆಂಜರ್ಸ್ ಬೆಂಗಳೂರು ಐಪಿಎಲ್ 2024ರಲ್ಲಿ ಅದ್ಭುತವನ್ನೇ ಮಾಡಿದೆ. ಸತತ ಪಂದ್ಯಗಳಲ್ಲಿ ಸೋತು ಒಂದು ಹಂತದಲ್ಲಿ ಪಾಯಿಂಟ್ ಪಟ್ಟಿಯಲ್ಲಿ ಕೊನೆಯ…
ಅತ್ಯಾಚಾರ ಮತ್ತು ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಹಾಸನ ಸಂಸದ ಪ್ರಜ್ವಲ್ ರೇವಣ್ಣ ತಲೆಮರೆಸಿಕೊಂಡಿದ್ದಾರೆ. ಅವರ ವಿರುದ್ಧ ಶನಿವಾರ ಅರೆಸ್ಟ್ ವಾರಂಟ್…
ಭೀಕರ ಸರಣಿ ಅಪಘಾತವು ಬೆಳಗಿನ ಜಾವ 4 ಗಂಟೆ ಸಮಯದಲ್ಲಿ ನರಗುಂದ ತಾಲೂಕಿನ ಭೈರನಹಟ್ಟಿ ಗ್ರಾಮದ ಬಳಿ ನಡೆದಿದೆ.
ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಸತತ ಸೋಲು ಕಂಡಾಗ ಸ್ಯಾಂಡಲ್ವುಡ್ ನಟ ದಿವಂಗತ ಪುನೀತ್ ರಾಜ್ಕುಮಾರ್ ಅವರ ಪತ್ನಿ ಅಶ್ವಿನಿಯವರನ್ನು…
ಸಿನಿ, ರಾಜಕೀಯ, ಕ್ರೀಡಾ ಕ್ಷೇತ್ರದ ದಿಗ್ಗಜರ ಬದುಕಿನ ಮೇಲೆ ಸಿನಿಮಾ ಮಾಡುವುದು ಅನಾದಿ ಕಾಲದಿಂದಲೂ ನಡೆದುಕೊಂಡು ಬಂದಿದೆ. ಆದರೆ ಇತ್ತೀಚೆಗೆ…