ಬೆಳಗಾವಿ : ಎಂಇಎಸ್, ಶಿವಸೇನಾ ಕಾರ್ಯಕರ್ತರ ಪುಂಡಾಟಿಕೆ ಮುಂದುವರೆದಿದ್ದು, ಸಚಿವೆ ಶಶಿಕಲಾ ಜೊಲ್ಲೆಯವರಿಗೆ ಸೇರಿದ ಕಟ್ಟಡದ ಮೇಲೆ ಎಂಇಎಸ್ ಹಾಗೂ ಶಿವಸೇನಾ ಕಾರ್ಯಕರ್ತರು ದಾಳಿ ಮಾಡಿದ್ದಾರೆ ಎನ್ನಲಾಗಿದೆ.
ಮಹಾರಾಷ್ಟ್ರದ ಕೊಲ್ಹಾಪುರದಲ್ಲಿ ಸಚಿವೆ ಶಶಿಕಲಾ ಜೊಲ್ಲೆ ಅವರಿಗೆ ಸೇರಿದ ಕಟ್ಟಡ ಕಾಮಗಾರಿಗಳನ್ನು ಶಿವಸೇನಾ ಕಾರ್ಯಕರ್ತರು ಬಂದ್ ಮಾಡಿದ್ದಾರೆ.
ಕೊಲ್ಹಾಪುರದಲ್ಲಿ ಶಶಿಕಲಾ ಜೊಲ್ಲೆ ಅವರು ಬಹುಮಹಡಿಯ ಕಟ್ಟಡದ ನಿರ್ಮಾಣವನ್ನು ಮಾಡುತ್ತಿದ್ದಾರೆ. ಕಟ್ಟಡ ನಿರ್ಮಾಣ ಹಂತರದಲ್ಲಿದ್ದು, ಇಂತಹ ಕಟ್ಟಡದ ಮೇಲೆ ಶಿವಸೇನೆ ಮತ್ತುಎಂಇಎಸ್ ಕಾರ್ಯಕರ್ತರು ದಾಳಿ ಮಾಡಿ ಕಟ್ಟಡ ನಿರ್ಮಾಣಕ್ಕೆ ಸಂಬಂಧಿಸಿದ ವಸ್ತುಗಳನ್ನು ಹಾನಿಗೊಳಿಸಿದ್ದಾರೆ ಎಂದು ವರದಿಯಾಗಿದೆ.