ಬೆಳಗಾವಿ: ನಿಮಗೆ ಸಪೋರ್ಟ್? ಮಾಡಲಿಲ್ಲ ಅಂತ ನನ್ನನ್ನು ಜೈಲಿಗೆ ಕಳುಹಿಸಿದ್ರಿ, ಅದಕ್ಕೆ ನಾನು ಜೈಲಿಗೆ ಹೋದೆ ಎಂದು ಸಚಿವ ಕೆ.ಎಸ್.ಈಶ್ವರಪ್ಪಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ತಿರುಗೇಟು ನೀಡಿದರು.
ನಿನ್ನೆ ಡಿ.ಕೆ.ಶಿವಕುಮಾರ್ ತಿಹಾರ್ ಜೈಲಿಗೆ ಏಕೆ ಹೋಗಿದ್ದರು. ಅವರು ಏನು ತಪ್ಪು ಮಾಡಿದ್ದರು ಎಂಬುದನ್ನು ಹೇಳಬೇಕು. ಹೆತ್ತ ತಾಯಿಯ ಕಣ್ಣೀರಿನ ಶಾಪ ಯಾರಿಗೆ ತಟ್ಟುತ್ತದೆ. ತಾಯಿ ಕಣ್ಣೀರು ಹಾಕುವಂತೆ ಮಾಡಿದ್ದು ಯಾರ ತಪ್ಪು? ರಾಜ್ಯದ ಜನರಿಗೆ ಡಿ.ಕೆ.ಶಿವಕುಮಾರ್ ಉತ್ತರ ನೀಡಬೇಕು. ಡಿಕೆಶಿ ಬಂಡೆಯಲ್ಲಿ ಎಷ್ಟು ಹಣ ಮಾಡಿದ್ದಾರೆ ಗೊತ್ತಿದೆ ಎಂದು ಸಚಿವ ಕೆ.ಎಸ್.ಈಶ್ವರಪ್ಪ ಕಿಡಿಕಾರಿದ್ದರು.
ಇದಕ್ಕೆ ಪ್ರತಿಕ್ರಿಯಿಸಿದ ಡಿಕೆಶಿ, ನಿಮಗೆ ಸಪೋರ್ಟ್? ಮಾಡಲಿಲ್ಲ, ನಿಮ್ಮ ಜೊತೆ ಬರಲಿಲ್ಲ. ಅದಕ್ಕೆ ನನ್ನ ಜೈಲಿಗೆ ಕಳುಹಿಸಿದ್ರಿ. ಎಲ್ಲಾ ಗೊತ್ತಿದೆಯಲ್ಲ, ರೆಕಾರ್ಡ್ ಇದೆಯಲ್ಲ ಎಂದು ಗಡುಗಿದರು.