News Karnataka Kannada
Sunday, May 05 2024
ಬೆಳಗಾವಿ

ಸ್ವಗ್ರಾಮ ತಲುಪಿದ ಸಂತೋಷ್ ಪಾಟೀಲ್ ಮೃತದೇಹ

Santhosh Patil
Photo Credit :

ಬೆಳಗಾವಿ : ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್.ಈಶ್ವರಪ್ಪ ವಿರುದ್ಧ ಭ್ರಷ್ಟಾಚಾರದ ಆರೋಪ ಮಾಡಿದ್ದ ಸಂತೋಷ್ ಪಾಟೀಲ್ ಅವರ ಪಾರ್ಥಿವ ಶರೀರ ಇಂದು ತಾಲೂಕಿನ ಬಡಸ ಗ್ರಾಮಕ್ಕೆ ತಲುಪಿದೆ.

ಉಡುಪಿಯ ಲಾಡ್ಜ್ ವೊಂದರಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದ ಸಂತೋಷ್ ಪಾಟೀಲ್ ಮೃತದೇಹವನ್ನು ಉಡುಪಿಯಿಂದ ಸ್ವಗ್ರಾಮ ಬಡಸ ಗ್ರಾಮಕ್ಕೆ ತರಲಾಗಿದೆ.

ಉಡುಪಿಯಿಂದ ಮೃತದೇಹದೊಂದಿಗೆ ಬಂದಿದ್ದ ಮೃತನ ಸಹೋದರ ಬಸವನಗೌಡ ಪೊಲೀಸ್ ಆಯುಕ್ತರ ಕಚೇರಿಗೆ ಮೃತದೇಹ ಕೊಂಡೊಯ್ಯಲು ಯತ್ನಿಸಿದ್ದಾರೆ. ಈ ವೇಳೆ ಪೊಲೀಸರು ಆರೋಪಿಗಳನ್ನು ಬಂಧಿಸುವುದಾಗಿ ಭರವಸೆ ಕೊಟ್ಟ ಹಿನ್ನೆಲೆಯಲ್ಲಿ ಹೂಟ್ಟೂರು ಬಡಸ ಗ್ರಾಮಕ್ಕೆ ಮೃತದೇಹವನ್ನು ಕೊಂಡೊಯ್ಯಲಾಗಿದೆ.

ಸಚಿವ ಕೆ.ಎಸ್. ಈಶ್ವರಪ್ಪ ವಿರುದ್ಧ ಪರ್ಸೆಂಟೇಜ್ ಆರೋಪದಲ್ಲಿ ಆತ್ಮಹತ್ಯೆ ಮಾಡಿಕೊಂಡು ಸಾವನ್ನಪ್ಪಿದ ಗುತ್ತಿಗೆದಾರ ಸಂತೋಷ್ ಪಾಟೀಲ್ ಮೃತದೇಹವನ್ನು ನಿನ್ನೆ ಮಣಿಪಾಲ ಫಾರೆನ್ಸಿಕ್ ಮೆಡಿಸಿನ್ ವಿಭಾಗದಲ್ಲಿ ಹಸ್ತಾಂತರ ಮಾಡಲಾಯಿತು. ಬಳಿಕ ಹವಾನಿಯಂತ್ರಿತ ಅಂಬುಲೆನ್ಸ್ ನಲ್ಲಿ ಮೃತದೇಹವನ್ನು ಬೆಳಗಾವಿಯ ಬಡಸ ಗ್ರಾಮಕ್ಕೆ ರವಾನೆ ಮಾಡಲಾಗಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12790
NewsKannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು