News Karnataka Kannada
Friday, May 10 2024
ಬೆಳಗಾವಿ

ಬೆಳಗಾವಿ: ಜನರಿಗೆ ಪರಿಹಾರ ಒದಗಿಸುವ ಅಧಿವೇಶನವಾಗಲಿದೆ – ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

7000 CC cameras installed under Safe City Project- CM Bommai
Photo Credit : News Kannada

ಬೆಳಗಾವಿ: ಇಂದಿನಿಂದ ಬೆಳಗಾವಿಯಲ್ಲಿ ವಿಧಾನಮಂಡಲ ಅಧಿವೇಶನ ಪ್ರಾರಂಭವಾಗುತ್ತಿದ್ದು, ಹಲವು ವಿಚಾರಗಳ ಬಗ್ಗೆ ಚರ್ಚಿಸಿ, ಜನರಿಗೆ ಪರಿಹಾರ ಒದಗಿಸುವ ಅಧಿವೇಶನವಾಗಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

ಅವರು ಇಂದು ಬೆಳಗಾವಿಯ ಸಾಂಬ್ರಾ ವಿಮಾನ ನಿಲ್ದಾಣಕ್ಕೆ ಬಂದಿಳಿದು ಸುವರ್ಣ ವಿಧಾನಸೌಧಕ್ಕೆ ತೆರಳುವ ಮುನ್ನ ಮಾಧ್ಯಮದವರಿಗೆ ಪ್ರತಿಕ್ರಿಯೆ ನೀಡಿದರು.

ಈ ಭಾಗದ ಸಮಸ್ಯೆಗಳ ಬಗ್ಗೆ ಚರ್ಚೆ ನಡೆಸಿ ಪರಿಹಾರ ಕಂಡುಕೊಳ್ಳಬೇಕಿದೆ. ರಾಜ್ಯವನ್ನು ಮುನ್ನಡೆಸುವ ದಿಸೆಯಲ್ಲಿ ಹತ್ತು ಹಲವಾರು ವಿಷಯಗಳ ಬಗ್ಗೆ ಚರ್ಚೆಯಾಗಬೇಕಿದೆ. ಹಲವಾರು ಕಾನೂನುಗಳ ರಚನೆಗಳ ಉದ್ದೇಶದಿಂದ ಕಲಾಪ ನಡೆಸಲಾಗುತ್ತಿದೆ ಎಂದರು.

ವಿಧಾನಸಭೆಯಲ್ಲಿ ಭಾವಚಿತ್ರಗಳ ಅನಾವರಣ ಸ್ಪೀಕರ್ ವಿವೇಚನೆಗೆ ಬಿಟ್ಟ ವಿಚಾರ:

ವಿಧಾನಸಭೆಯಲ್ಲಿ ಭಾವಚಿತ್ರಗಳ ಅನಾವರಣವಾಗಲಿದ್ದು, ಕಾಂಗ್ರೆಸ್ ಈ ಬಗ್ಗೆ ಅಪಸ್ವರ ಎತ್ತಿದ್ದು, ಎಲ್ಲ ಮಹನೀಯರುಗಳ ಭಾವಚಿತ್ರವನ್ನು ಅಳವಡಿಸುವ ಬಗ್ಗೆ ವಿರೋಧಪಕ್ಷದ ನಾಯಕ ಸಿದ್ದರಾಮಯ್ಯ ಪತ್ರ ಬರೆದಿರುವ ಬಗ್ಗೆ ಪ್ರತಿಕ್ರಿಯೆ ನೀಡಿ, ಪತ್ರದ ವಿಚಾರ ಗಮನಕ್ಕೆ ಬಂದಿಲ್ಲ ಹಾಗೂ ವಿಧಾನಸಭೆಯಲ್ಲಿ ಭಾವಚಿತ್ರ ಅನಾವರಣಗೊಳಿಸುವುದು ಸ್ಪೀಕರ್ ರವರ ವಿವೇಚನೆಗೆ ಬಿಟ್ಟಿರುವ ವಿಚಾರ. ವಿರೋಧಪಕ್ಷದ ನಾಯಕರು ಹಾಗೂ ಸ್ಪೀಕರ್ ರೊಂದಿಗೂ ಈ ವಿಚಾರದ ಬಗ್ಗೆ ಮಾತಾನಾಡಲಾಗುವುದು ಎಂದರು.

ಪಂಚಮಸಾಲಿ ಸಮುದಾಯಕ್ಕೆ ಮೀಸಲಾತಿ ನೀಡುವ ಬಗ್ಗೆ ಉತ್ತರಿಸಿ, ಸಮುದಾಯಕ್ಕೆ ಮೀಸಲಾತಿ ನೀಡಲು ಯಾವುದೇ ಗಡುವು ನಿಗದಿಪಡಿಸಿಲ್ಲ. ಹಿಂದುಳಿದ ವರ್ಗಗಳ ಆಯೋಗದಿಂದ ಶೀಘ್ರದಲ್ಲಿ ವರದಿ ಬರುವ ವಿಶ್ವಾಸವಿದೆ ಎಂದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12792
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು