ಬೆಳಗಾವಿ: ಕರ್ನಾಟಕ ಪ್ರದೇಶ ಕಾಂಗ್ರೆಸ್ ಕಾರ್ಯಾಧ್ಯಕ್ಷ ಹಾಗೂ ಶಾಸಕ ಸತೀಶ್ ಜಾರಕಿಹೊಳಿ ಅವರು ವಿಧಾನಸಭಾ ಚುನಾವಣೆಯಲ್ಲಿ ಟಿಕೆಟ್ ಹಂಚಿಕೆಗಾಗಿ ಭಾರತೀಯ ಜನತಾ ಪಕ್ಷ ಅನುಸರಿಸುತ್ತಿರುವ ಕಾರ್ಯತಂತ್ರವನ್ನು ಬಹಿರಂಗವಾಗಿ ಶ್ಲಾಘಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಜಾರಕಿಹೊಳಿ, ಬಿಜೆಪಿಯ ಗುಜರಾತ್ ಮಾದರಿಯಲ್ಲೇ ಕಾಂಗ್ರೆಸ್ ಅಭ್ಯರ್ಥಿಗಳಿಗೆ ಟಿಕೆಟ್ ಹಂಚಿಕೆ ಮಾಡಬೇಕು.
ಗುಜರಾತ್ ನಲ್ಲಿ ಹೊಸ ಮುಖಗಳಿಗೆ ಬಿಜೆಪಿ ಟಿಕೆಟ್ ಹಂಚಿಕೆ ಮಾಡಿದೆ. ಕಳೆದ ಮೂರು ಚುನಾವಣೆಗಳಲ್ಲಿ ೩೦ ರಿಂದ ೪೦ ಹೊಸ ಅಭ್ಯರ್ಥಿಗಳು ವಿಧಾನಸಭಾ ಟಿಕೆಟ್ ಪಡೆದಿದ್ದಾರೆ. ಆದರೆ ಕಾಂಗ್ರೆಸ್ ಉದ್ದೇಶಪೂರ್ವಕವಾಗಿಯೇ ಪರಾಜಿತ ಅಭ್ಯರ್ಥಿಗಳಿಗೆ ಟಿಕೆಟ್ ಹಂಚಿಕೆ ಮಾಡುತ್ತದೆ ಎಂದು ಅವರು ಹೇಳಿದರು.
ಅವರು ಹಿರಿಯರು ಎಂಬ ಕಾರಣಕ್ಕಾಗಿ ಟಿಕೆಟ್ ಗಳನ್ನು ಹಂಚಿಕೆ ಮಾಡಲಾಗುತ್ತದೆ. ಒಂದುವೇಳೆ ಗೆಲ್ಲುವ ಸಾಮರ್ಥ್ಯವಿದ್ದರೆ, ಅವರಿಗೆ ಟಿಕೆಟ್ ಗಳನ್ನು ಹಂಚಿಕೆ ಮಾಡಬಹುದು. ಜಾತೀಯತೆಯ ಯುಗ ಮುಗಿದಿದೆ. ಜನರು ಕೆಲಸವನ್ನು ಗಮನಿಸುತ್ತಿದ್ದಾರೆ. ಈ ನಿಟ್ಟಿನಲ್ಲಿ ಕಾಂಗ್ರೆಸ್ ಶ್ರಮಿಸಬೇಕು ಎಂದು ಸತೀಶ್ ಜಾರಕಿಹೊಳಿ ಹೇಳಿದರು.
ಗುಜರಾತ್ ನಲ್ಲಿ ಬಿಜೆಪಿ ಗೆಲುವು ಪ್ರಧಾನಿ ನರೇಂದ್ರ ಮೋದಿ ಅವರ ಮ್ಯಾಜಿಕ್ ಅಲ್ಲ ಅಥವಾ ಅಭಿವೃದ್ಧಿಯ ಪ್ರತಿಬಿಂಬವೂ ಅಲ್ಲ ಎಂದು ಅವರು ಹೇಳಿದರು.
ಆಮ್ ಆದ್ಮಿ ಪಕ್ಷ (ಎಎಪಿ) ಚುನಾವಣೆಯಲ್ಲಿ ಶೇ.13ರಷ್ಟು ಮತಗಳನ್ನು ಪಡೆದಿರುವುದು ಗುಜರಾತ್ ನಲ್ಲಿ ಕಾಂಗ್ರೆಸ್ ಸೋಲಿಗೆ ಕಾರಣ ಎಂದು ಜಾರಕಿಹೊಳಿ ಸಮರ್ಥಿಸಿಕೊಂಡಿದ್ದಾರೆ.
ಅಭಿವೃದ್ಧಿಯ ಮಾಯಾಜಾಲವಿಲ್ಲ ಎಂದು ಅವರು ಪುನರುಚ್ಚರಿಸಿದರು. ಎಎಪಿ ಪಡೆದ ಶೇಕಡಾ ೧೩ ರಷ್ಟು ಮತಗಳು ಕಾಂಗ್ರೆಸ್ ಪಕ್ಷಕ್ಕೆ ಸೇರಿವೆ. ಈ ಮತಗಳು ಕಾಂಗ್ರೆಸ್ ಗೆ ಬಂದಿದ್ದರೆ, ಪಕ್ಷವು 60 ರಿಂದ 70 ಕ್ಷೇತ್ರಗಳಲ್ಲಿ ಗೆಲ್ಲುತ್ತಿತ್ತು.
ಎಎಪಿಯ ಪ್ರದರ್ಶನವು ಕಾಂಗ್ರೆಸ್ ಪಕ್ಷದ ಮೇಲೆ ನೇರ ಪರಿಣಾಮ ಬೀರಿದೆ ಎಂದು ಅವರು ಹೇಳಿದರು.
ಗಡಿ ವಿವಾದದ ಬಗ್ಗೆ ಮಾತನಾಡಿದ ಅವರು, ಇಂತಹ ಘಟನೆಗಳು ನಡೆಯುತ್ತಲೇ ಇದ್ದರೆ ಬೆಳಗಾವಿಗೆ ಅಪಾಯವಿದೆ. ಕರ್ನಾಟಕ ಮತ್ತು ಮಹಾರಾಷ್ಟ್ರ ಎರಡೂ ರಾಜ್ಯಗಳ ಮುಖ್ಯಮಂತ್ರಿಗಳು ಈ ಸಮಸ್ಯೆಯನ್ನು ಶೀಘ್ರದಲ್ಲೇ ಪರಿಹರಿಸಬೇಕು ಎಂದು ಅವರು ಹೇಳಿದರು.