News Karnataka Kannada
Sunday, April 28 2024
ಬೆಳಗಾವಿ

ಬೆಳಗಾವಿ: ನಾನು ಯಾವುದೇ ಕಾರಣಕ್ಕೂ ಬಿಜೆಪಿ ತೊರೆಯುವುದಿಲ್ಲ- ರಮೇಶ್ ಜಾರಕಿಹೋಳಿ

Belagavi: 'I will not leave BJP at any cost'
Photo Credit : Twitter

ಬೆಳಗಾವಿ: ನಾನು ಜೆಡಿಎಸ್ ನಾಯಕ ಎಚ್.ಡಿ.ಕುಮಾರಸ್ವಾಮಿ ಅವರನ್ನು ಭೇಟಿ ಮಾಡಿದ್ದು ನಿಜ. ಆದರೆ ನಾನು ಜೆಡಿಎಸ್ ಸೇರುತ್ತೇನೆ ಎಂಬ ಊಹಾಪೋಹಗಳಲ್ಲಿ ಯಾವುದೇ ಹುರುಳಿಲ್ಲ. ನಾನು ಯಾವುದೇ ಕಾರಣಕ್ಕೂ ಬಿಜೆಪಿ ತೊರೆಯುವ ಪ್ರಶ್ನೆಯೇ ಇಲ್ಲ ಎಂದು ಮಾಜಿ ಸಚಿವ ರಮೇಶ್ ಜಾರಕಿಹೋಳಿ ಹೇಳಿದ್ದಾರೆ.

ನಗರದಲ್ಲಿ ನ.19ರ ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ತಾವು ಕಾಂಗ್ರೆಸ್ ನಲ್ಲಿ ಸಚಿವರಾಗಿದ್ದರೂ ಅದನ್ನು ತೊರೆದು ಬಿಜೆಪಿ ಸೇರಿ ಸರ್ಕಾರ ರಚಿಸಿದ್ದಾಗಿ ತಿಳಿಸಿದರು. ಈಗ ನಾನು ಯಾರ ಬಳಿಯೂ ಹೋಗಿ ನನ್ನನ್ನು ಮತ್ತೆ ಮಂತ್ರಿಯನ್ನಾಗಿ ಮಾಡುವಂತೆ ವಿನಂತಿಸಿಕೊಂಡಿಲ್ಲ. ಅಂತಹ ಯಾವುದೇ ಬೇಡಿಕೆ ಇಲ್ಲ ಎಂದು ಅವರು ಹೇಳಿದರು.

“ಬಿಜೆಪಿ ನಾಯಕರು ನನ್ನನ್ನು ಸಚಿವರನ್ನಾಗಿ ಮಾಡಲಿ ಬಿಡಲಿ, ನಾನು ಪಕ್ಷವನ್ನು ತೊರೆಯುವುದಿಲ್ಲ. ಮುಂದಿನ ಚುನಾವಣೆಯಲ್ಲಿ ಮತ್ತೊಮ್ಮೆ ಬಿಜೆಪಿ ಸರ್ಕಾರ ರಚಿಸಲು ನಾನು ನನ್ನ ಕೈಲಾದಷ್ಟು ಪ್ರಯತ್ನಿಸುತ್ತೇನೆ. ೨೦೨೩ ರ ಚುನಾವಣೆಯ ಸಾಲಿನಲ್ಲಿ ಪಕ್ಷವು ನನಗೆ ಪ್ರಮುಖ ಜವಾಬ್ದಾರಿಯನ್ನು ನೀಡಲಿದೆ. ನಾನು ಅದನ್ನು ಯಶಸ್ವಿಯಾಗಿ ನಿಭಾಯಿಸುತ್ತೇನೆ” ಎಂದು ಅವರು ಹೇಳಿದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12790
NewsKannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು