ಬೆಳಗಾವಿ: ಕೇಂದ್ರ ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಅವರಿಗೆ ಬೆದರಿಕೆ ಕರೆಗಳು ಬಂದಿರುವ ಹಿನ್ನೆಲೆಯಲ್ಲಿ ಮಹಾರಾಷ್ಟ್ರ ಪೊಲೀಸರು ಕರ್ನಾಟಕದ ಹಿಂಡಲಗಾ ಜೈಲಿನಲ್ಲಿ ದಾಳಿ ನಡೆಸಿದ್ದಾರೆ ಎಂದು ಪೊಲೀಸ್ ಮೂಲಗಳು ಶನಿವಾರ ತಿಳಿಸಿವೆ.
ಪೊಲೀಸರ ಪ್ರಕಾರ, ಗುರುವಾರ ಸಂಜೆ ದಾಳಿ ನಡೆಸಲಾಯಿತು. ಮಾರ್ಚ್ 21 ರಂದು ಹಿಂಡಲಗಾ ಜೈಲಿನಿಂದ ನಾಗ್ಪುರ ನಗರದ ಗಡ್ಕರಿ ಅವರ ಕಚೇರಿಗೆ ಕರೆಗಳನ್ನು ಮಾಡಲಾಗಿದೆ. ಕಚೇರಿಗೆ ಬೆದರಿಕೆ ಮತ್ತು ಸುಲಿಗೆಯ ಮೂರು ಕರೆಗಳು ಬಂದಿವೆ ಎಂದು ಮೂಲಗಳು ತಿಳಿಸಿವೆ.
ಕರೆ ಮಾಡಿದವರನ್ನು ಹಿಂಡಲಗಾ ಜೈಲಿನ ಕೈದಿ ಜಯೇಶ್ ಪೂಜಾರಿ ಎಂದು ಗುರುತಿಸಲಾಗಿದೆ. ಸಚಿವರಿಂದ 10 ಕೋಟಿ ಸುಲಿಗೆ ಹಣಕ್ಕೆ ಬೇಡಿಕೆ ಇಟ್ಟಿದ್ದರು. ಪಾವತಿಸಲು ವಿಫಲವಾದರೆ ಗಡ್ಕರಿ ಪರಿಣಾಮಗಳನ್ನು ಅನುಭವಿಸಬೇಕಾಗುತ್ತದೆ ಎಂದು ದುಷ್ಕರ್ಮಿಗಳು ಬೆದರಿಸಿದ್ದರು . ಜನವರಿ ತಿಂಗಳಲ್ಲೂ ಗಡ್ಕರಿ ಅವರ ಕಚೇರಿಗೆ ಕರೆಗಳನ್ನು ಮಾಡಲಾಗಿತ್ತು.
ಜೈಲಿನಲ್ಲಿ ಅಕ್ರಮವಾಗಿ ಜಯೇಶ್ ಪೂಜಾರಿ ಹೊಂದಿದ್ದ ಮೊಬೈಲ್ ಅನ್ನು ಮಹಾರಾಷ್ಟ್ರದ ತಂಡ ವಶಪಡಿಸಿಕೊಂಡಿದೆ. ನಾಗ್ಪುರದಲ್ಲಿರುವ ಗಡ್ಕರಿ ಅವರ ಕಚೇರಿ ಮತ್ತು ನಿವಾಸಕ್ಕೆ ಭದ್ರತೆಯನ್ನು ಬಿಗಿಗೊಳಿಸಲಾಗಿದೆ. ಪೊಲೀಸ್ ಮೂಲಗಳ ಪ್ರಕಾರ, ಜೈಲಿನಲ್ಲಿ ಎರಡು ಸಿಮ್ ಕಾರ್ಡ್ಗಳು ಮತ್ತು ಮೊಬೈಲ್ಗಳು ಪತ್ತೆಯಾಗಿವೆ. ನಾಗ್ಪುರ ಪೊಲೀಸರು ತನಿಖೆಗಾಗಿ ಜಯೇಶ್ ಪೂಜಾರಿಯನ್ನು ಶೀಘ್ರದಲ್ಲೇ ಕಸ್ಟಡಿಗೆ ತೆಗೆದುಕೊಳ್ಳುತ್ತಾರೆ. ಆರೋಪಿ ಜಯೇಶ್ ಪೂಜಾರಿ ಜೀವಾವಧಿ ಶಿಕ್ಷೆಗೆ ಗುರಿಯಾಗಿದ್ದಾನೆ.