ಬೆಳಗಾವಿ: ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನಿಯಮಿತ (ಕೆಪಿಟಿಸಿಎಲ್)ದಲ್ಲಿ ಕಿರಿಯ ದರ್ಜೆ ಸಹಾಯಕರ ಹುದ್ದೆಯ ಲಿಖಿತ ಪರೀಕ್ಷೆಯಲ್ಲಿ ಅಕ್ರಮ ಎಸಗಿದ ಆರೋಪದ ಮೇಲೆ ಗೋಕಾಕ್ ನ ಕೋಚಿಂಗ್ ಸೆಂಟರ್ ಮಾಲೀಕನನ್ನು ಪೊಲೀಸರು ಬಂಧಿಸಿದ್ದಾರೆ.
ಮೂಡಲಗಿ ತಾಲೂಕಿನ ರಾಜಾಪುರ ಗ್ರಾಮದ ಗೋಕಾಕ್ ನ ಖಾಸಗಿ ಕೋಚಿಂಗ್ ಸೆಂಟರ್ ಮಾಲೀಕ ಬಾಳೇಶ ಕೆಂಚಪ್ಪ ಕಟ್ಟಿಕರ (26) ಬಂಧಿತ ಆರೋಪಿ. ಕೆಪಿಟಿಸಿಎಲ್ ಜೂನಿಯರ್ ಗ್ರೇಡ್ ಅಸಿಸ್ಟೆಂಟ್ ಪರೀಕ್ಷೆಯ ವೇಳೆ ಅಭ್ಯರ್ಥಿಗಳಿಗೆ ಎಲೆಕ್ಟ್ರಾನಿಕ್ ಸಾಧನಗಳು, ಮೈಕ್ರೋಚಿಪ್ ಗಳನ್ನು ನೀಡಿದ ಆರೋಪದ ಮೇಲೆ ಬಾಲೇಶ್ ನನ್ನು ಬಂಧಿಸಲಾಗಿದೆ.
ಪರೀಕ್ಷೆಗೆ ಹಾಜರಾಗಿದ್ದ 17ಕ್ಕೂ ಹೆಚ್ಚು ಅಭ್ಯರ್ಥಿಗಳನ್ನು ಈಗಾಗಲೇ ಬಂಧಿಸಲಾಗಿದೆ. ಸಂಜೀವ್ ಭಂಡಾರಿ, ಮಂಜುನಾಥ ಮಾಳಿ, ಶ್ರೀಧರ್ ಕಟ್ಟಿಕರ್, ಬಾಳೇಶ್ ಅವರೊಂದಿಗೆ ಸೇರಿ ಎಲೆಕ್ಟ್ರಾನಿಕ್ ಸಾಧನ, ಮೈಕ್ರೋಚಿಪ್ ನೀಡಿ ಅಭ್ಯರ್ಥಿಗಳಿಗೆ ಉತ್ತರ ಬರೆದಿದ್ದರು.
ತನಿಖಾಧಿಕಾರಿ ಡಿಸಿಆರ್ ಬಿ ಡಿಎಸ್ಪಿ ವೀರೇಶ ದೊಡಮನಿ ತನಿಖೆ ನಡೆಸಿ ಆರೋಪಿಯನ್ನು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.