ಬೆಳಗಾವಿ: ಕರ್ನಾಟಕ ಪೊಲೀಸರು ಸಮರ್ಪಣಾ ಭಾವದಿಂದ ಕೆಲಸ ಮಾಡುತ್ತಿದ್ದಾರೆ ಮತ್ತು ಪೊಲೀಸರು ಗಡಿ ಪ್ರದೇಶಗಳಲ್ಲಿ ಶಕ್ತಿ ಪ್ರದರ್ಶನ ಮಾಡಬಾರದು, ಆದರೆ ನಾಗರಿಕರೊಂದಿಗೆ ನಿರಂತರ ಸಂಪರ್ಕದಲ್ಲಿರಬೇಕು ಮತ್ತು ಅವರ ಸಮಸ್ಯೆಗಳನ್ನು ಪರಿಹರಿಸಬೇಕು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
ಬೆಳಗಾವಿಯ ಪೊಲೀಸ್ ಆಯುಕ್ತರ ನೂತನ ಕಚೇರಿಯನ್ನು ಉದ್ಘಾಟಿಸಿದ ನಂತರ ಮಾತನಾಡಿದ ಅವರು, ಗಡಿ ಪ್ರದೇಶಗಳ ಸಮಸ್ಯೆಗಳನ್ನು ಪರಿಹರಿಸಿದರೆ ಪ್ರಯೋಜನವಾಗುತ್ತದೆ ಎಂದು ಹೇಳಿದರು.
ಇತ್ತೀಚೆಗೆ, ವಿಚ್ಛಿದ್ರಕಾರಿ ಚಟುವಟಿಕೆಗಳು ನಡೆಯುತ್ತಿವೆ ಆದರೆ ಪೊಲೀಸರು ಅತ್ಯಂತ ಸಮರ್ಪಣಾ ಭಾವದಿಂದ ಕೆಲಸ ಮಾಡುತ್ತಿರುವುದರಿಂದ ಅಪರಾಧವನ್ನು ಪತ್ತೆಹಚ್ಚುವುದು ಸಹ ತ್ವರಿತವಾಗಿ ನಡೆಯುತ್ತಿದೆ ಎಂದು ಬೊಮ್ಮಾಯಿ ಹೇಳಿದರು.
ಗೃಹ ಸಚಿವರಾಗಿ ತಾವು ಶಂಕುಸ್ಥಾಪನೆ ನೆರವೇರಿಸಿದ ಹಲವಾರು ಪೊಲೀಸ್ ಠಾಣೆ ಕಟ್ಟಡಗಳನ್ನು ಈಗ ಉದ್ಘಾಟಿಸಲಾಗುತ್ತಿದೆ ಎಂದು ಅವರು ಹೇಳಿದರು. ಎಫ್ಎಸ್ಎಲ್ ವರದಿಯನ್ನು 15 ದಿನಗಳಲ್ಲಿ ಸ್ವೀಕರಿಸುವುದರಿಂದ ಅಪರಾಧಗಳನ್ನು ನಿಯಂತ್ರಣದಲ್ಲಿಡಲು ಸಹಾಯ ಮಾಡುತ್ತದೆ ಎಂದು ಅವರು ಹೇಳಿದರು.
ಒಂದು ವರ್ಷದಲ್ಲಿ ೧೦೦ ಕ್ಕೂ ಹೆಚ್ಚು ಹೊಸ ಪೊಲೀಸ್ ಠಾಣೆ ಕಟ್ಟಡಗಳನ್ನು ನಿರ್ಮಿಸಲಾಗುತ್ತಿದೆ. ಪೊಲೀಸ್ ಹೌಸಿಂಗ್ ಬೋರ್ಡ್ ರಾಜ್ಯದಾದ್ಯಂತ ಉತ್ತಮ ಕೆಲಸವನ್ನು ಮಾಡುತ್ತಿದೆ ಮತ್ತು 2,500 ಮನೆಗಳನ್ನು ನಿರ್ಮಿಸುವಲ್ಲಿ ತೊಡಗಿಸಿಕೊಂಡಿದೆ ಎಂದು ಅವರು ಹೇಳಿದರು.
‘ಈಗಾಗಲೇ 16 ಪೊಲೀಸ್ ಠಾಣೆ ಕಟ್ಟಡಗಳು ನಿರ್ಮಾಣ ಹಂತದಲ್ಲಿವೆ. ಒಟ್ಟು 100 ಕ್ಕೂ ಹೆಚ್ಚು ಹೊಸ ಪೊಲೀಸ್ ಠಾಣೆ ಕಟ್ಟಡಗಳನ್ನು ನಿರ್ಮಿಸಲಾಗುತ್ತಿದೆ. 300 ಜೀಪುಗಳು ಮತ್ತು ಸ್ಕಾರ್ಪಿಯೋ ವಾಹನಗಳನ್ನು 80 ಕೋಟಿ ರೂ.ಗೆ ಖರೀದಿಸಲಾಗುವುದು. ಸ್ಕಾರ್ಪಿಯೋ ವಾಹನವನ್ನು ಉಪ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ಒದಗಿಸಲಾಗುವುದು” ಎಂದು ಅವರು ಹೇಳಿದರು.