News Karnataka Kannada
Sunday, May 19 2024
ಬೆಳಗಾವಿ

ಬೆಳಗಾವಿ: ಕರ್ನಾಟಕಕ್ಕೆ ಬಂದಿಳಿದ ರಾಹುಲ್ ಗಾಂಧಿ, ಖರ್ಗೆ

Rahul Gandhi, Kharge arrive in Karnataka
Photo Credit : IANS

ಬೆಳಗಾವಿ: ಕಾಂಗ್ರೆಸ್ ಹಿರಿಯ ರಾಹುಲ್ ಗಾಂಧಿ ಅವರೊಂದಿಗೆ, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಸೋಮವಾರ ಬೆಳಗಾವಿಗೆ ಆಗಮಿಸಿದ್ದಾರೆ. ಯುವಕ್ರಾಂತಿ ಸಮಾವೇಶದಲ್ಲಿ ರಾಹುಲ್‌ಗಾಂಧಿ ಪಾಲ್ಗೊಳ್ಳುವರು.

ಸಾಂಬ್ರಾ ವಿಮಾನ ನಿಲ್ದಾಣದಲ್ಲಿ ಕಾಂಗ್ರೆಸ್ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಮತ್ತು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ರಾಹುಲ್ ಗಾಂಧಿ, ಮಲ್ಲಿಕಾರ್ಜುನ ಖರ್ಗೆ ಅವರನ್ನು ಸ್ವಾಗತಿಸಿದರು.

ರಾಹುಲ್ ಗಾಂಧಿ ಅವರ ಭವ್ಯ ಸ್ವಾಗತಕ್ಕಾಗಿ ಬೆಳಗಾವಿ ನಗರವು ಪೋಸ್ಟರ್ಗಳು, ಸ್ವಾಗತ ಕಟೌಟ್ಗಳು ಮತ್ತು ಬ್ಯಾನರ್ಗಳಿಂದ ಅಲಂಕರಿಸಲ್ಪಟ್ಟಿದೆ. ಸಮಾವೇಶದಲ್ಲಿ 1 ಲಕ್ಷಕ್ಕೂ ಹೆಚ್ಚು ಯುವಕರು ಭಾಗವಹಿಸುತ್ತಿದ್ದಾರೆ ಎಂದು ಪಕ್ಷದ ಮೂಲಗಳು ತಿಳಿಸಿವೆ.

ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಅಧಿಕಾರಕ್ಕೆ ಮರಳುವ ವಿಶ್ವಾಸದಲ್ಲಿರುವ ಕಾಂಗ್ರೆಸ್, ಬೆಳಗಾವಿ ಜಿಲ್ಲೆಯಲ್ಲಿ ಅಧಿಕ ಸ್ಥಾನಗಳನ್ನು ಗೆಲ್ಲಲು ಬಯಸಿದೆ. ಅದೇ ರೀತಿ ಬಿಜೆಪಿಯು ಹೆಚ್ಚಿನ ಸ್ಥಾನ ಗಳಿಸಲು ಶ್ರಮವಹಿಸಿದೆ. ಪ್ರಧಾನಿ ನರೇಂದ್ರ ಮೋದಿ ಅವರು ಬೆಳಗಾವಿಯಲ್ಲಿ 10.8 ಕಿಲೋಮೀಟರ್ ರೋಡ್ ಶೋ ನಡೆಸಿ ಬೃಹತ್ ಸಾರ್ವಜನಿಕ ರ‍್ಯಾಲಿಯನ್ನುದ್ದೇಶಿಸಿ ಮಾತನಾಡಿದ್ದನ್ನು ಗಮನಿಸಬಹುದು

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

30409

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು