ಬೆಳಗಾವಿ: ನಿಪ್ಪಾಣಿ ತಾಲೂಕು 3ನೇ ಕನ್ನಡ ಸಾಹಿತ್ಯ ಸಮ್ಮೇಳನ ಡಿ.11ರ ಭಾನುವಾರ ಜಿಲ್ಲೆಯ ಗಡಿಭಾಗದ ಭೋಜ ಗ್ರಾಮದಲ್ಲಿ ನಡೆಯಲಿದೆ ಎಂದು ನಿಪ್ಪಾಣಿ ತಾಲೂಕು ಸಾಹಿತ್ಯ ಪರಿಷತ್ ಅಧ್ಯಕ್ಷ ಈರಣ್ಣ ಶಿರಗಾವಿ ತಿಳಿಸಿದರು.
ಭೋಜ ಗ್ರಾಮದಲ್ಲಿ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ಮುಜರಾಯಿ ಹಜ್ ಮತ್ತು ವಕ್ಫ್ ಸಚಿವೆ ಶಶಿಕಲಾ ಜೊಲ್ಲೆ ಅವರು ಗಡಿ ಪ್ರದೇಶಗಳಲ್ಲಿ ಒಂದು ದಿನದ ಅಕ್ಷರ ಜಾತ್ರಾ ಮಹೋತ್ಸವದ ನೇತೃತ್ವ ವಹಿಸಲಿದ್ದಾರೆ. ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷತೆಯನ್ನು ಸಾಹಿತಿ ಅದ್ವಯಾನಂದ ಗಲಾಟ ವಹಿಸುವರು. ಖ್ಯಾತ ಚಲನಚಿತ್ರ ನಟ ಮತ್ತು ನಿರ್ದೇಶಕ ಟಿ.ಎಸ್.ನಾಗಾಭರಣ ಸಮ್ಮೇಳನವನ್ನು ಉದ್ಘಾಟಿಸಲಿದ್ದಾರೆ.
ಚಿಂಚಣಿ ಅಲ್ಲಮಪ್ರಭು ಸ್ವಾಮೀಜಿ, ಖಡಕಲಾಟದ ಶಾವಬಸವ ಸ್ವಾಮೀಜಿ, ಕೌಲಗುಡ್ಡದ ಸಿದ್ದಯೋಗಿ ಅಮರೇಶ್ವರ ಮಹಾರಾಜರು ಸಾನ್ನಿಧ್ಯ ವಹಿಸುವರು.