News Karnataka Kannada
Thursday, May 02 2024
ಬೆಳಗಾವಿ

ಬೆಳಗಾವಿ: ಸರ್ಕಾರ ರೈತರಿಗೆ ಧನಾತ್ಮಕವಾಗಿ ಸ್ಪಂದಿಸಲಿದೆ- ಸಚಿವ ಆರ್. ಅಶೋಕ

R Ashok
Photo Credit : News Kannada

ಬೆಳಗಾವಿ: ಮೂಲ ಖೇಣಿದಾರರು,ಕುಮ್ಕಿ ಜಮೀನು, ಖಾನೆ, ಬಾನೇ,ಡೀಮ್ಡ್ ಅರಣ್ಯ ಸಾಗುವಳಿದಾರರ ಸಮಸ್ಯೆ ನಿವಾರಿಸಲು ಈಗಾಗಲೇ ಸಮಿತಿ ರಚಿಸಲಾಗಿದ್ದು, ರೈತರಿಗೆ ಸಹಾಯವಾಗುವಂತೆ ಕಾನೂನಾತ್ಮಕವಾಗಿ ತೀರ್ಮಾನ ಮಾಡಲಾಗುವುದು ಎಂದು ಕಂದಾಯ ಸಚಿವ ಆರ್.ಅಶೋಕ ಹೇಳಿದರು.

ಶಾಸಕರಾದ ಲಿಂಗೇಶ್ ಅವರ ಗಮನ ಸೆಳೆಯುವ ಸೂಚನೆಗೆ ಪ್ರತಿಕ್ರಿಯಿಸಿದ ಸಚಿವರು, ಈ ಜಮೀನುಗಳನ್ನು ಯಾವುದೇ ಕಾರಣಕ್ಕೂ ಕೈಗಾರಿಕೋದ್ಯಮಿಗಳಿಗೆ ನೀಡುವುದಿಲ್ಲ, ಈಗಾಗಲೇ ಸೇಂದಿ ವನಗಳನ್ನು 20-30 ವರ್ಷದಿಂದ ಸಾಗುವಳಿ ಮಾಡುತ್ತಿರುವವರಿಗೆ ಮಂಜೂರು ಮಾಡಲಾಗಿದೆ. ಅದರಂತೆ ಈ ಜಾಗಗಳನ್ನು ಕಾನೂನಾತ್ಮಕವಾಗಿ ರೈತರಿಗೆ ನೀಡುವ ಮೂಲಕ ರೈತರಿಗೆ ನ್ಯಾಯ ಒದಗಿಸಿಕೊಡಲಾಗುವುದು ಹಾಗೂ ಈಗಾಗಲೇ ರೈತರ ಮೇಲಿದ್ದ ಕೇಸುಗಳನ್ನು ಹಿಂಪಡೆಯಲಾಗಿದೆ ಎಂದರು.

ಶಾಸಕ ಕುಮಾರ್ ಬಂಗಾರಪ್ಪ ಮಾತನಾಡಿ, ಸಣ್ಣ,ಅತಿಸಣ್ಣ ಹಿಡುವಳಿದಾರರಿಗೆ ಸ್ವಾಧೀನದಲ್ಲಿರುವವರಿಗೆ ನೀಡಿ ಎಂದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12792
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು