ಬೆಳಗಾವಿ: ಇಲ್ಲಿನ ಸುವರ್ಣ ವಿಧಾನಸೌಧದಲ್ಲಿ ನಡೆದ ಚಳಿಗಾಲದ ಅಧಿವೇಶನದಲ್ಲಿ ಒಟ್ಟು 12 ಮಸೂದೆಗಳನ್ನು ಮಂಡಿಸಲಾಗಿದ್ದು, ಅವುಗಳಲ್ಲಿ 9 ಮಸೂದೆಗಳನ್ನು ಅಂಗೀಕರಿಸಲಾಗಿದೆ ಎಂದು ವಿಧಾನಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ ತಿಳಿಸಿದರು.
ನಗರದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, 9 ದಿನಗಳ ಅಧಿವೇಶನ ಸುಮಾರು 41 ಗಂಟೆ 20 ನಿಮಿಷಗಳ ಕಾಲ ನಡೆಯಿತು. ಅಧಿವೇಶನದಲ್ಲಿ ಶಾಸಕರ ಹಾಜರಾತಿ ತೃಪ್ತಿಕರವಾಗಿರಲಿಲ್ಲ. ಒಟ್ಟು ಹಾಜರಾತಿ ಶೇಕಡಾ ೭೫ ರಷ್ಟಿತ್ತು. ಇದು ಸರಿಯಾದ ಬೆಳವಣಿಗೆಯಲ್ಲ ಎಂದರು.
ದಿನೇಶ್ ಗುಂಡೂರಾವ್, ಹರೀಶ್ ಪೂಂಜ, ಕೃಷ್ಣಪ್ಪ, ಜಮೀರ್ ಅಹಮದ್, ಅನಿತಾ ಕುಮಾರಸ್ವಾಮಿ ಸೇರಿದಂತೆ 9 ಶಾಸಕರು ಅನುಮತಿ ಪಡೆಯದೆ ಸದನಕ್ಕೆ ಗೈರು ಹಾಜರಾಗಿದ್ದಾರೆ ಎಂದು ಕಾಗೇರಿ ಹೇಳಿದರು.