News Karnataka Kannada
Saturday, May 04 2024
ಬೆಳಗಾವಿ

ಬೆಳಗಾವಿ: ಮಳೆಗೆ ಗೋಡೆ ಕುಸಿದು ಬಾಲಕ ಸ್ಥಳದಲ್ಲೇ ಸಾವು

Boy dies on spot as wall collapses due to rain
Photo Credit : Twitter

ಖಾನಾಪುರ: ಮಳೆಯಿಂದಾಗಿ ಗೋಡೆ ಬಿದ್ದು ಬಾಲಕ ಸ್ಥಳದಲ್ಲೇ ಮೃತಪಟ್ಟ ಘಟನೆ ತಾಲ್ಲೂಕಿನ ಚುಂಚವಾಡ ಗ್ರಾಮದಲ್ಲಿ ಗುರುವಾರ ತಡರಾತ್ರಿ ನಡೆದಿದೆ.

15 ವರ್ಷದ ಅನಂತು ಧರ್ಮೇಂದ್ರ ಪಾಶೆಟ್ಟಿ ಮೃತಪಟ್ಟ ಬಾಲಕ. ರಾತ್ರಿ ಎಲ್ಲರೂ ಮಲಗಿದ್ದ ಸಂದರ್ಭದಲ್ಲಿ ಬಾಲಕ ಎದ್ದು ದನಗಳಿಗೆ ಮೇವು ಹಾಕಲು ಕೊಟ್ಟಿಗೆಗೆ ಹೋಗಿದ್ದ. ಈ ಸಂದರ್ಭದಲ್ಲೇ ಕೊಟ್ಟಿಗೆಯ ಮಣ್ಣಿನ ಗೋಡೆ ಕುಸಿದು ಬಾಲಕ ಅದರಡಿ ಸಿಲುಕಿಕೊಂಡಿದ್ದಾನೆ.

ಗೋಡೆ ಬಿದ್ದ ಸದ್ದು ಹಾಗೂ ಬಾಲಕನ ಚೀರಾಟ ಕೇಳಿ ಮನೆಯ ಸದಸ್ಯರು ತಕ್ಷಣ ಧಾವಿಸಿದರು. ಮಣ್ಣಿನ ಗೋಡೆಯ ಅವಶೇಷ ತೆಗೆದು ಬಾಲಕರನ್ನು ಹೊರಗೆಳೆದರು. ಅಷ್ಟರೊಳಗೆ ಬಾಲಕ ಕೊನೆಯುಸಿರೆಳೆದಿದ್ದ ಎಂದು ಕುಟುಂಬದವರು ತಿಳಿಸಿದ್ದಾರೆ.

ನಂದಗಡ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

 

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12790
NewsKannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು