ಬೆಳಗಾವಿ: ಲೋಕಸಭೆ ಚುನಾವಣೆ ಬಳಿಕ ರಾಜ್ಯದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ವಿಪಕ್ಷ ನಾಯಕರ ಬದಲಾವಣೆಯಾಗಲಿದೆ ಎಂದು ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಪುನರುಚ್ಚರಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಉತ್ತರ ಕರ್ನಾಟಕದವರು ದಕ್ಷಿಣ ಕರ್ನಾಟಕ ಭಾಗದ ನಾಯಕರ ಗುಲಾಮರಲ್ಲ. ಅಲ್ಲದೆ, ಉತ್ತರ ಕರ್ನಾಟಕದವರಿಗೆ ನಾಯಕತ್ವ ನೀಡಿ ನ್ಯಾಯ ಒದಗಿಸುವವರೆಗೂ ಪಕ್ಷದ ಶಾಸಕಾಂಗ ಸಭೆಗೂ ನಾನು ಹೋಗುವುದಿಲ್ಲ ಎಂದರು. ತೆಲಂಗಾಣದಲ್ಲಿ ಕುಟುಂಬ ರಾಜಕಾರಣವನ್ನು ಕಿತ್ತು ಹಾಕಲಾಗಿದೆ.
ನನ್ನನ್ನು ಸೋಲಿಸಲು ಸಾಕಷ್ಟು ಹಣ ಹರಿದು ಬಂತು. ನಮಲ್ಲೇ ಇರುವ ಕೆಲ ವೈರಿಗಳನ್ನು ನನ್ನ ವಿರುದ್ಧ ನಿಲ್ಲಿಸಲಾಯಿತಲ್ಲದೆ, ನನ್ನನ್ನು ಸೋಲಿಸಲು ವಿವಿಧಡೆಯಿಂದ ಸಾಕಷ್ಟು ಹಣ ಹರಿದು ಬಂತು. ಇನ್ನು, ಮಹಾನಗರ ಪಾಲಿಕೆ ಚುನಾವಣೆಯಲ್ಲೂ ಬಿಜೆಪಿ ಅಭ್ಯರ್ಥಿಗಳನ್ನು ಸೋಲಿಸಲು ಪ್ರಯತ್ನಿಸಿದರು ಎಂದು ವಿಜಯಪುರ ನಗರ ಶಾಸಕ ಬಸನಗೌಡ ಪಾಟೀಲ ಯತ್ನಾಳ್ ದೂರಿದರು.
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾನು ಅಂದರೆ ಬಿಜೆಪಿ ಅನ್ನುವರೂ ಆಗ ಪಕ್ಷದ ಪರ ಕೆಲಸ ಮಾಡಲಿಲ್ಲ. ಆದರೂ ನಮ್ಮ ಮೇಲಿನ ನಂಬಿಕೆ, ಪ್ರೀತಿಯಿಂದ ಪಾಲಿಕೆ ಇತಿಹಾಸದಲ್ಲೇ ಕಂಡರಿದ ಫಲಿತಾಂಶ ಹೊರಬಿತ್ತು ಎಂದರು.