ಬೆಳಗಾವಿ: ಜಿಲ್ಲೆಯ ಬೈಲಹೊಂಗಲ ತಾಲೂಕಿನ ಹಾರುಗೊಪ್ಪ ಗ್ರಾಮದಲ್ಲಿ ಆಘಾತಕಾರಿ ಘಟನೆಯೊಂದು ಸಂಭವಿಸಿದೆ. ಮಗಳಿಗೆ ಬಾಲ್ಯವಿವಾಹ ಮಾಡಿಸುವುದು ಬೇಡ ಎಂದ ಪತ್ನಿಯ ಕಾಲನ್ನು ಪತಿ ಮುರಿದಿದ್ದಾನೆ.
13 ವರ್ಷದ ಮಗಳಿಗೆ ಮದುವೆ ಮಾಡಲು ಮುಂದಾಗಿದ್ದಕ್ಕೆ, ಮಗಳ ವಯಸ್ಸು ಚಿಕ್ಕದು ಮದುವೆ ಬೇಡ. ಮಗಳನ್ನು ಚನ್ನಾಗಿ ಓದಿಸೋಣ ಎಂದು ಹೇಳಿದಕ್ಕೆ ಬೀರಪ್ಪ ಎಂಬ ವ್ಯಕ್ತಿ ತನ್ನ ಹೆಂಡತಿ ಮಾಯವ್ವಾಳ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ್ದಾನೆ. ಸದ್ಯ ಮಾಯವ್ವಾ ಬೈಲಹೊಂಗಲ ತಾಲೂಕು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಪ್ರಕರಣ ದಾಖಲಾದ್ರೂ ಪೋಲಿಸರು ಆರೋಪಿಯನ್ನು ಬಂಧಿಸಿಲ್ಲ ಅಂತಾ ಮಹಿಳೆ ಆಕ್ರೋಶ ಹೊರ ಹಾಕಿದ್ದಾರೆ. ಮುರಗೋಡ ಪೋಲಿಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.