ಬೆಳಗಾವಿ: ರಾಮಲಲ್ಲಾ ಪ್ರಾಣಪ್ರತಿಷ್ಠಾಪನೆಯ ದಿನದಂದು ಬೆಳಗಾವಿ ದಕ್ಷಿಣ ಕ್ಷೇತ್ರದ ಬಿಜೆಪಿ ಶಾಸಕ ಅಭಯ ಪಾಟೀಲ್ ತಮ್ಮ ಕ್ಷೇತ್ರದ 1 ಲಕ್ಷ ಮನೆಗಳಿಗೆ 5 ಲಕ್ಷ ಮೋತಿಚೂರು ಲಾಡು ವಿತರಣೆ ಮಾಡುವ ಯೋಜನೆ ಹಾಕಿಕೊಂಡಿದ್ದಾರೆ.
ದಕ್ಷಿಣ ಕ್ಷೇತ್ರದಲ್ಲಿ 1 ಲಕ್ಷ ಮನೆಗಳಿಗೆ ಲಾಡು ವಿತರಿಸಲಿದ್ದಾರೆ. 300 ಗ್ರಾಮದ ಪ್ರತಿ ಮನೆಗಳಿಗೆ 5 ಲಾಡುಗಳನ್ನೊಳಗೊಂಡ ಬಾಕ್ಸ್ ವಿತರಿಸಲಿದ್ದಾರೆ.
ಸ್ವಾತಂತ್ರ್ಯ ಅಮೃತಮಹೋತ್ಸವ ಸಮಯದಲ್ಲಿ ಪ್ರತಿ ಮನೆಗೆ ಜಿಲೇಬಿ ವಿತರಿಸಿದ್ದ ಶಾಸಕ ಅಭಯ್ ಪಾಟೀಲ್ ರಾಮಮಂದಿರ ಉದ್ಘಾಟನೆಗೆ ಲಾಡು ವಿತರಿಸಲಿದ್ದಾರೆ.
ಈಗಾಗಲೇ ಲಾಡು ತಯಾರಿಸುವ ಕಾರ್ಯಕ್ಕಾಗಿ ರಾಜಸ್ಥಾನದಿಂದ 50 ಮಂದಿ ನುರಿತರು ಬೆಳಗಾವಿಗೆ ಬಂದಿದ್ದಾರೆ.
ಸ್ಥಳೀಯ 250 ಮಹಿಳೆಯರು ಮೋತಿಚೂರು ಲಾಡು ತಯಾರಿಕೆ ಕಾರ್ಯದಲ್ಲಿ ಭಾಗಿಯಾಗಿದ್ದಾರೆ. ಕಾರ್ಯಕರ್ತರು ಮನೆ ಮನೆಗೆ ತೆರಳಿ ಲಾಡು ವಿತರಿಸುವ ಕಾರ್ಯಕ್ಕೆ ಸಜ್ಜಾಗುತ್ತಿದ್ದಾರೆ.
ಹೊಳೆಯಲ್ಲಿ ಮುಳುಗಿ ಇಬ್ಬರು ಮೃತಪಟ್ಟಿರುವ ಘಟನೆ ಇಂದು ಉತ್ತರ ಕನ್ನಡ ಜಿಲ್ಲೆಯ ಭಟ್ಕಳದ ಕಡವಿನಕಟ್ಟೆಯಲ್ಲಿ ನಡೆದಿದೆ.
ಸಾಣೂರಿನ ಲೈನ್ ಮ್ಯಾನ್ ಸುಭಾಷ್ ರವರು ತಮ್ಮ ತಂಡದೊಂದಿಗೆ ಮೇ 17 ರಂದು ಮುರತಂಗಡಿ ಇರುವತ್ತೂರು ರಸ್ತೆ ತಿರುವಿನಲ್ಲಿರುವ ವಿದ್ಯುತ್…
ರಕ್ಷಕರೇ ಭಕ್ಷಕರಾದ ಘಟನೆಯೊಂದು ಕೋಲಾರದಲ್ಲಿ ನಡೆದಿದೆ . ಕಳವು ಕೇಸ್ನಲ್ಲಿ ರಿಕವರಿ ಮಾಡಿದ್ದ 1 ಕೆಜಿ 408 ಗ್ರಾಂ ಚಿನ್ನದಲ್ಲಿ…
ಪ್ರಧಾನಿ ನರೇಂದ್ರ ಮೋದಿಯವರು ಮಣ್ಣಿನ ಮಗ, ಬಡ ಕುಟುಂಬದಲ್ಲಿ ಹುಟ್ಟಿ ದೇಶದ ಕಲ್ಯಾಣ ಮತ್ತು ಅಭಿವೃದ್ಧಿಗೆ ಶ್ರಮಿಸುತ್ತಿದ್ದಾರೆ. ಎಂದು ಹಿಮಾಚಲ…
ನಗರದ ವಾಸವಿ ಯುವಜನ ಸಂಘ ಮತ್ತು ವಾಸವಿ ಕ್ಲಬ್ ಆಶ್ರಯದಲ್ಲಿ ಇಂದು ನಗರದ ಮಲ್ಲೇಗೌಡ ಸರ್ಕಾರಿ ಆಸ್ಪತ್ರೆಯಲ್ಲಿ ರಕ್ತದಾನ ಶಿಬಿರವನ್ನು…
ಡೆಂಗ್ಯೂ ಸೋಂಕಿನಿಂದ ಬಳಲುತ್ತಿರುವ ಗ್ರಾಮಕ್ಕೆ ತಜ್ಞ ವೈದ್ಯಾಧಿಕಾರಿ ಗಳ ತಂಡವನ್ನು ರಚಿಸಿ ನಿವಾಸಿಗಳ ಆರೋಗ್ಯ ಕಾಪಾಡಬೇಕು ಎಂದು ಎರೆಹಳ್ಳಿ ಗ್ರಾಮಸ್ಥರು…