ಬೆಳಗಾವಿ: ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಗುಡಸ ಗ್ರಾಮದ ಬಳಿ ಪತ್ರಕರ್ತರ ಸೋಗಿನಲ್ಲಿ ಶ್ರೀಗಂಧದ ಮರದ ತುಂಡುಗಳನ್ನ ಸಾಗಿಸುತ್ತಿದ್ದ ಓರ್ವ ನಕಲಿ ಪತ್ರಕರ್ತನನ್ನು ಬಂಧಿಸಿದ ಘಟನೆ ನಡೆದಿದೆ.
ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ಹುಕ್ಕೇರಿ ಅರಣ್ಯ ಇಲಾಖೆಯ ಅರಣ್ಯಾಧಿಕಾರಿ ಪ್ರಸನ್ನ ಬೆಲ್ಲದ ನೇತೃತ್ವದಲ್ಲಿ ಅಧಿಕಾರಿಗಳು 40 ಕೆಜಿ ಶ್ರೀಗಂಧ ಹಾಗೂ ಕಳ್ಳ ಸಾಗಾಟಕ್ಕೆ ಬಳಸಿದ್ದ ಕಾರನ್ನು ಜಪ್ತಿ ಮಾಡಿದ್ದಾರೆ.
ಆರೋಪಿ ಪುಂಡಲೀಕ ಭಜಂತ್ರಿಯನ್ನು ವಶಕ್ಕೆ ಪಡೆದಿದ್ದಾರೆ.
ಓರ್ವ ನಕಲಿ ಪತ್ರಕರ್ತ ಸಿಕ್ಕಿಬಿದ್ದಿದ್ದು, ಇನ್ನುಳಿದ ಪತ್ರಕರ್ತರು ಪರಾರಿಯಾಗಿದ್ದಾರೆ. ಪರಸಪ್ಪ ಭಜಂತ್ರಿ ಎಂಬುವರಿಗೆ ಸೇರಿದ ಕಾರಿನಲ್ಲಿ ಪುಂಡಲೀಕ ಭಜಂತ್ರಿ ಎಂಬುವರ ನಕಲಿ ಯೂಟ್ಯೂಬ್ ಐಡಿ ಪತ್ತೆಯಾಗಿದೆ.