News Karnataka Kannada
Sunday, May 12 2024
ಬೆಳಗಾವಿ

ಪರಿಶಿಷ್ಟ ಜಾತಿ- ಪಂಗಡ ಮೀಸಲಾತಿ ಹೆಚ್ಚಳ, ವಿಸ್ತೃತ ಚರ್ಚೆಗೆ ಸರ್ಕಾರ ಸಿದ್ಧ:  ಬಸವರಾಜ ಬೊಮ್ಮಾಯಿ

Bommai
Photo Credit : News Kannada

ಬೆಳಗಾವಿ; ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಠ ಪಂಗಡದ ಮೀಸಲಾತಿ ಪ್ರಮಾಣದ ಹೆಚ್ಚಳ ಹಾಗೂ ಅದರ ಕಾನೂನಾತ್ಮಕ ಸವಾಲುಗಳ ಪರಿಹಾರಗಳ ಕುರಿತು ಸದನದಲ್ಲಿ ವಿಸ್ತೃತವಾಗಿ ಚರ್ಚಿಸಲು ಸರ್ಕಾರ ಸಿದ್ಧವಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.

ವಿಧಾನಸಭೆಯಲ್ಲಿಂದು ವಿರೋಧಪಕ್ಷದ ನಾಯಕ ಸಿದ್ದರಾಮಯ್ಯ ಅವರು ಮಂಡಿಸಿದ ನಿಲುವಳಿ ಸೂಚನೆಗೆ ಪ್ರತಿಕ್ರಿಯೆ ನೀಡಿದ ಮುಖ್ಯಮಂತ್ರಿ ಬೊಮ್ಮಾಯಿ ಅವರು, ಈ ವಿಷಯದಲ್ಲಿ ಸರ್ಕಾರ ಹಾಗೂ ಪ್ರತಿಪಕ್ಷಗಳು ಒಂದೇ ನಿಲುವು ಹೊಂದಿವೆ.

ಜನ ಸಂಖ್ಯೆಯ ಪ್ರಮಾಣಕ್ಕೆ ಅನುಗುಣವಾಗಿ ಪರಿಶಿಷ್ಟ ಜಾತಿಯ ಮೀಸಲಾತಿಯನ್ನು ಶೇ.15 ರಿಂದ ಶೇ.17 ಕ್ಕೆ ಹಾಗೂ ಪರಿಶಿಷ್ಟ ಪಂಗಡದ ಮೀಸಲು ಪ್ರಮಾಣವನ್ನು ಶೇ.3 ರಿಂದ ಶೇ.7 ಕ್ಕೆ ಹೆಚ್ಚಿಸಲು ಕ್ರಮವಹಿಸಲಾಗಿದೆ.

ಈ ನಿಟ್ಟಿನಲ್ಲಿ ಎದುರಾಗಬಹುದಾದ ಕಾನೂನಾತ್ಮಕ ಸವಾಲುಗಳಿಗೆ ಪರಿಹಾರ ಕಂಡುಕೊಳ್ಳುವುದು, ಸಂವಿಧಾನಾದ 9 ನೇ ಪರಿಚ್ಛೇದದಡಿ ಸೇರಿಸಲು ಅನುಕೂಲವಾಗುವಂತೆ ವಿಸ್ತೃತವಾಗಿ ಚರ್ಚಿಸಲು ಸರ್ಕಾರ ಸಿದ್ಧವಿದೆ. ಈ ಬಗ್ಗೆ ಆರೋಗ್ಯಕರ ಚರ್ಚೆಗೆ ಸಮಯ ನಿಗದಿಪಡಿಸಲು ಸಭಾಧ್ಯಕ್ಷರನ್ನು ಕೋರಿದರು.

ಸರ್ಕಾರಿ ನೌಕರರ ಹಳೇ ಪಿಂಚಣಿ ವ್ಯವಸ್ಥೆ ಸಾಧಕ ಭಾಧಕಗಳ ಚರ್ಚೆಗೆ ನಿರ್ಧಾರ:
ಸರ್ಕಾರಿ ನೌಕರರ ಹಳೇ ಪಿಂಚಣಿ ಜಾರಿಗೆ ವಿಧಾನ ಸಭೆಯಲ್ಲಿ ಸದಸ್ಯರ ಆಗ್ರಹಕ್ಕೆ ಉತ್ತರಿಸಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇದೊಂದು ಗಂಭೀರ ವಿಚಾರವಾಗಿದ್ದು ಸದನದಲ್ಲಿ ವಿಸ್ತೃತ ಚರ್ಚೆಯಾಗಲಿ ಎಂದರು.

ಇಡೀ ರಾಜ್ಯದ ಜನರ ಶ್ರಮದಿಂದ ಬೊಕ್ಕಸಕ್ಕೆ ಹಣ ಬರುತ್ತದೆ. ಆ ಪೈಕಿ ಯಾವ್ಯಾವ ಬಾಬತ್ತುಗಳಿಗೆ ಖರ್ಚು ಮಾಡಬೇಕೆಂದು ಆಯವ್ಯದಲ್ಲಿ ನಿರ್ಧರಿಸಲಾಗುತ್ತದೆ, ಹಾಗೂ ಎಷ್ಟು ಖರ್ಚು ಮಾಡಲಾಗುತ್ತದೆ ಎಂಬ ಬಗೆಗೆ ಚರ್ಚೆ ಆಗುತ್ತದೆ.

ಈಗಾಗಲೇ ಸರ್ಕಾರಿ ನೌಕರರಿಗೆ ಹಲವಾರು ಸೌಕರ್ಯಗಳನ್ನು ಒದಗಿಸಲಾಗಿದೆ, ಕಾಲಕಾಲಕ್ಕೆ ಅವರ ಟಿಎ, ಡಿಎ ನೀಡಲಾಗುತ್ತಿದೆ. ಈ ಹಿಂದೆ ಡಿಎ ನೀಡಲು ಬಹಳ ಸಮಯ ತೆಗೆದುಕೊಳ್ಳಲಾಗುತಿತ್ತು, ಆದರೆ ನಮ್ಮ ಸಕಾರ 24 ಗಂಟೆಯಲ್ಲಿ ನೌಕರರಿಗೆ ಟಿಎ ನೀಡಿದೆ, 7 ನೇ ವೇತನ ಆಯೋಗವನ್ನು ರಚಿಸಲಾಗಿದೆ.

2006 ರಿಂದ ಹೊಸ ಪಿಂಚಣಿ ಜಾರಿಯಾಗಿದೆ, ಹಳೇ ಪಿಂಚಣಿ ಸಂಬAಧ ಸಾಧಕ ಭಾದಕಗಳ ಚರ್ಚೆ ಮಾಡಬೇಕಾಗಿರುವುದರಿಂದ ನಾಳಿನ ಚರ್ಚೆಯಲ್ಲಿ ಸುಧೀರ್ಘವಾಗಿ ಚರ್ಚಿಸೋಣ ಎಂದರು. ಇದಕ್ಕೆ ಸದನದ ಸದಸ್ಯರು ಸಮ್ಮತಿ ವ್ಯಕ್ತಪಡಿಸಿದರು.

 

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12795
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು