ಬೆಳಗಾವಿ: ರಾಜ್ಯ ರಾಜಕಾರಣದಲ್ಲಿ ಜಾರಕಿಹೊಳಿ ಕುಟುಂಬ ಮೊದಲಿಂದಲೂ ಪ್ರಮುಖ ಪಾತ್ರ ವಹಿಸುತ್ತಿದೆ. ಈ ಹಿಂದೆ ರಮೇಶ್ ಜಾರಕಿಹೊಳಿ ಸಮ್ಮಿಶ್ರ ಸರ್ಕಾರದ ಪತನಕ್ಕೆ ಕಾರಣವಾಗಿದ್ದರು. ಇದೀಗ ಅವರು ಮತ್ತೊಮ್ಮೆ ಸ್ಫೋಟಕ ಹೇಳಿಕೆಯೊಂದನ್ನು ನೀಡಿದ್ದಾರೆ.
ನಾನು ಎಚ್ ಡಿಕೆ ಜೊತೆಗೆ ಆಪ್ತನಾಗುತ್ತಿರುವುದಕ್ಕೆ ಡಿಕೆಶಿ ನನ್ನ ವಿರುದ್ಧ ಹುನ್ನಾರ ಮಾಡುತ್ತಿದ್ದಾರೆ. ಎಂದು ಹೇಳಿದ್ದಾರೆ. ಕಾಂಗ್ರೆಸ್ ಶಾಸಕರೇ ಸರ್ಕಾರದ ವಿರುದ್ಧ ಮಾತನಾಡುತ್ತಿದ್ದಾರಲ್ಲ. ಡಿಕೆಶಿ ಇರುವ ಸರ್ಕಾರ ಯಾವಾಗಲೂ ಡೇಂಜರ್ ಎಂದು ಅವರು ಹೇಳಿದ್ದಾರೆ.
ಡಿಕೆಶಿ ಅಧಿಕಾರದಲ್ಲಿದ್ದಾಗ ಒಂದು ರೀತಿ ಇರುತ್ತಾರೆ. ಪ್ರತಿಪಕ್ಷದಲ್ಲಿದ್ದಾಗ ಒಂದು ರೀತಿ ಇರುತ್ತಾರೆ. ಎಂದ ಅವರು ಮಹಾರಾಷ್ಟ್ರ ಮಾದರಿಯಲ್ಲಿ ಕರ್ನಾಟಕದಲ್ಲಿಯೂ ಸರ್ಕಾರ ಪತನವಾಗಲಿದೆ ಎಂದರು. ಒಂದೇ ರಾತ್ರಿಯಲ್ಲಿ ಬೆಳವಣಿಗೆ ನಡೆದು ಸರ್ಕಾರ ಪತನವಾಗಲಿದೆ. ಆಪರೇಷನ್ ಕಮಲ ಮಾಡುವುದಿಲ್ಲ. ಅಷ್ಟು ಸಣ್ಣ ಮಾತು ನಾನು ಆಡುವುದಿಲ್ಲ ಎಂದಿದ್ದಾರೆ.