News Karnataka Kannada
Monday, April 29 2024
ಬೆಳಗಾವಿ

ದಲಿತರು ಬಿಜೆಪಿ ರಾಜ್ಯಾಧ್ಯಕ್ಷ ಆಗಬಾರದೆಂಬ ನಿಯಮ ಇದೆಯೇ: ರಮೇಶ್​​ ಜಿಗಜಿಣಗಿ ಪ್ರಶ್ನೆ

Is there a rule that Dalits should not become BJP state presidents: Ramesh Jigajinagi
Photo Credit : Facebook

ಬೆಳಗಾವಿ: ರಾಜ್ಯಾಧ್ಯಕ್ಷ ಯಾರು ಆಗಬೇಕೆಂದು ಬಹಿರಂಗ ಚರ್ಚೆ ಸರಿಯಲ್ಲ. ನಮ್ಮದು ರಾಷ್ಟ್ರೀಯ ಪಕ್ಷ, ರಾಷ್ಟ್ರೀಯ ನಾಯಕರಿಂದಲೇ ಆಯ್ಕೆಯಾಗುತ್ತಾರೆ. ನಳಿನ್‌ ಕುಮಾರ್ ಕಟೀಲ್​ ಅವರ ಅವಧಿ ಮುಗಿದಿದೆ ಎಂದು ಗೊತ್ತಾಗಿದೆ. ರಾಜ್ಯ ಬಿಜೆಪಿ ಘಟಕದ ಅಧ್ಯಕ್ಷನಾಗಬೇಕೆಂದು ಎಲ್ಲರಿಗೂ ಆಸೆ ಇರುತ್ತೆ. ನಾನು ಕೂಡ ಬಿಜೆಪಿಯ ಹಿರಿಯ ನಾಯಕ. ಪಕ್ಷ ಅವಕಾಶ ಕೊಟ್ಟರೆ ನಾನು ಕೂಡ ರಾಜ್ಯಾಧ್ಯಕ್ಷನಾಗುವೆ. ಬಿಜೆಪಿಯಲ್ಲಿ ದಲಿತರು ರಾಜ್ಯ ಘಟಕದ ಅಧ್ಯಕ್ಷ ಆಗಬಾರದೇ? ಎಂದು ಸಂಸದ ರಮೇಶ್​​ ಜಿಗಜಿಣಗಿ ಪ್ರಶ್ನಿಸಿದ್ದಾರೆ.

ಬೆಳಗಾವಿಯಲ್ಲಿ ಬಿಜೆಪಿ ಕಾರ್ಯಕರ್ತರ ಸಭೆಯಲ್ಲಿ ರಾಜ್ಯಾಧ್ಯಕ್ಷ ಸ್ಥಾನ ನೀಡುವಂತೆ ಕೇಳುತ್ತೀರಾ ಎಂಬ ಮಾಧ್ಯಮಗಳ ಪ್ರಶ್ನೆಗೆ ಉತ್ತರಿಸಿದ ಅವರ ಎಲ್ಲಿ ಕೇಳಬೇಕು ಎಂಬುದು ನನಗೆ ಗೊತ್ತಿದೆ ಅದನ್ನು ಬಹಿರಂಗವಾಗಿ ಹೇಳುವುದಿಲ್ಲ. ಚುನಾವಣೆಯಲ್ಲಿ ಸೋಲು, ಗೆಲವು ಸಹಜ ಯಾರು ನಿರಾಶೆ ಆಗಬಾರದು. ನಮ್ಮ ಮತಗಳು ನಮಗೆ ಬಿದ್ದಿವೆ ಯಾರು ಎದೆಗುಂದಬೇಡಿ. ಕಾರ್ಯಕರ್ತರ ಸುಸ್ತು ಆಗಿ ಕೂರಬೇಡಿ. ಮತ್ತೆ ಸೆಡ್ಡು ಹೊಡೆದು ಕೆಲಸ ಆರಂಭಿಸಬೇಕು ಎಂದು ಕಾರ್ಯಕರ್ತರಲ್ಲಿ ಉತ್ಸಾಹ ತುಂಬಿದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು