ಬೆಳಗಾವಿ: ಈ ಬಾರಿಯ ಲೋಕಸಭೆ ಚುನಾವಣೆ ಎರಡನೇ ಸ್ವಾತಂತ್ರ್ಯ ಸಂಗ್ರಾಮ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.
ಅವರು ಬೆಳಗಾವಿಯಲ್ಲಿ ಭಾನುವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ ಪ್ರಧಾನಿಯಾದರೂ ನರೇಂದ್ರ ಮೋದಿ ದ್ವೇಷದ ಮಾತು ಬಿಟ್ಟಿಲ್ಲ. ಬಜರಂಗದಳದ ಕಾರ್ಯಕರ್ತರಂತೆ ಮಾತನಾಡುತ್ತಿದ್ದಾರೆ. ಇಂಥವರಿಗೆ ಚಾಟಿ ಬೀಸುವ ಅವಕಾಶ ಈಗ ಮತದಾರರಿಗೆ ಒದಗಿ ಬಂದಿದೆ ಎಂದರು.