ಬೆಳಗಾವಿ: ಬಸವ ನಗರದಲ್ಲಿ ಪ್ರೇಯಸಿಯನ್ನ ಕೊಂದು ತಾನೂ ಆತ್ಮಹತ್ಯೆ ಗೆ ಶರಣಾದ ಘಟನೆ ನಡೆದಿದೆ. ಯರಗಟ್ಟಿ ತಾಲೂಕಿನ ಮದ್ದೂರು ಗ್ರಾಮದ ನಿವಾಸಿ 28 ವರ್ಷದ ರೇಣುಕಾ ಪಶ್ಚನ್ನವರ್ ಮೃತ ದುರ್ದೈವಿ.
ಹತ್ಯೆಗೈದ ವ್ಯಕ್ತಿ ರಾಮಚಂದ್ರ. ರೇಣುಕಾ ಪಶ್ಚನ್ನವರ್ ಖಾಸಗಿ ಆಸ್ಪತ್ರೆಯಲ್ಲಿ ನರ್ಸ್ ಆಗಿ ಕೆಲಸ ಮಾಡುತ್ತಿದ್ದಳು. ಎರಡು ವರ್ಷದಿಂದ ಒಬ್ಬರಿಗೊಬ್ಬರು ಪ್ರೀತಿಸುತ್ತಿದ್ದರು. ಕೆಲ ದಿನಗಳ ಹಿಂದೆ ರಾಮಚಂದ್ರನನ್ನ ಕಡೆಗಣಿಸುತ್ತಿದ್ದಳು ಎಂದು ಹೇಳಲಾಗಿದೆ.
ನಿನ್ನೆ ಸಂಜೆ ಮನೆಯಲ್ಲಿ ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಹೇಳಿ ಬಂದಿದ್ದ. ನಿನ್ನೆ ರಾತ್ರಿ ರೇಣುಕಾ ರೂಮ್ ಗೆ ಹೋಗಿ ಗಲಾಟೆ ಮಾಡಿ. ತಡರಾತ್ರಿ ಕುತ್ತಿಗೆ ಬಿಗಿದು ಕೊಂದು ಹತ್ಯೆ ಮಾಡಿ ನಂತರ ತಾನೂ ಆತ್ಮಹತ್ಯೆ ಶರಣಾಗಿದ್ದಾನೆ.