ಬೆಳಗಾವಿ: ರಾಜ್ಯದಲ್ಲಿ ಹಿಜಾಬ್ ವಿವಾದ ತೀವ್ರ ಸ್ವರೂಪ ಪಡೆದುಕೊಳ್ಳುತ್ತಿದೆ. ಇದೀಗ ಸಚಿವ ಸತೀಶ್ ಜಾರಕಿಹೊಳಿ ಈ ಕುರಿತು ಹೇಳಿಕೆಯೊಂದನ್ನು ನೀಡಿದ್ದಾರೆ.
ನಮ್ಮ ಸರ್ಕಾರ ಬಂದ ಮೇಲೆ ಹಿಜಾಬ್ ನಿಷೇಧ ವಾಪಸ್ ಪಡೆಯುತ್ತೇವೆ ಎಂದು ಚುನಾವಣಾ ಪ್ರಣಾಳಿಕೆಯಲ್ಲಿಯೇ ಹೇಳಿದ್ದೆವು ಎಂದು ಬೆಳಗಾವಿ ಉಸ್ತುವಾರಿ ಸಚಿವ ಸತೀಶ್ ಜಾರಕಿಹೊಳಿ ಹೇಳಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ನ್ಯಾಯಾಲಯಕ್ಕೆ ನಾವು ಸರ್ಕಾರದ ನಿಲುವು ತಿಳಿಸುತ್ತೇವೆ ಎಂದರು. ರಾಜ್ಯದಲ್ಲಿ ಸುಮಾರು 10 ಸಾವಿರ ಕೋಟಿ ರೂ. ವೆಚ್ಚದ 15 ರಾಷ್ಟ್ರೀಯ ಹೆದ್ದಾರಿ ಕಾಮಗಾರಿಗಳು ಒಂದಲ್ಲ ಒಂದು ಕಾರಣದಿಂದ ವಿಳಂಬವಾಗಿದೆ ಎಂದರು.