ಬೆಳಗಾವಿ: ಬೆಳಗಾವಿ ಜಿಲ್ಲೆಯಲ್ಲಿ 77 ನೇ ಸ್ವಾತಂತ್ರ್ಯ ದಿನಾಚರಣೆ ಸಂದರ್ಭ ತ್ರಿವರ್ಣ ಧ್ವಜದ ಜೊತೆಗೆ ಭಗವಾ ಧ್ವಜ ಹಾರಿಸುವ ಪ್ರಯತ್ನವನ್ನು ಕರ್ನಾಟಕ ಪೊಲೀಸರು ಮಂಗಳವಾರ ತಡೆದಿದ್ದಾರೆ.
ಬೆಳಗಾವಿಯ ಇಬ್ಬರು ಕಾರ್ಪೊರೇಟರ್ಗಳು ತಮ್ಮ ಬೆಂಬಲಿಗರೊಂದಿಗೆ ಜಿಲ್ಲೆಯ ನಿಪಾಣಿ ನಗರದ ಪುರಸಭೆಯ ಕಟ್ಟಡದ ಮೇಲೆ ತ್ರಿವರ್ಣ ಧ್ವಜದ ಜೊತೆಗೆ ಕೇಸರಿ ಧ್ವಜವನ್ನು ಹಾರಿಸಲು ಪ್ರಯತ್ನಿಸಿದರು. ಬಿಜೆಪಿ ಶಾಸಕಿ ಹಾಗೂ ಮಾಜಿ ಸಚಿವೆ ಶಶಿಕಲಾ ಜೊಲ್ಲೆತ್ರಿವರ್ಣ ಧ್ವಜಾರೋಹಣ ನೆರವೇರಿಸಿದ ಬಳಿಕ ಈ ಘಟನೆ ನಡೆದಿದೆ.
ನಿಪ್ಪಾಣಿ ಪುರಸಭೆಯ ಕಾರ್ಪೊರೇಟರ್ಗಳಾದ ವಿನಾಯಕ ವಾಡೆ ಮತ್ತು ಸಂಜಯ ಸಂಗಾವ್ಕರ್ ಅವರು ಭಗವಾ ಧ್ವಜ ಹಾರಿಸಲು ಪ್ರಯತ್ನಿಸಿದರು. ಪೊಲೀಸರು ಕಾರ್ಪೊರೇಟರ್ಗಳನ್ನು ತಡೆದು ವಾಪಸ್ ಕಳುಹಿಸಿದರು. ಕಾರ್ಪೋರೇಟರ್ ಗಳಿಗೆ ಎನ್ಸಿಪಿ ಬೆಂಬಲ ನೀಡಿದೆ ಎಂದು ತಿಳಿದುಬಂದಿದೆ.