News Karnataka Kannada
Monday, April 29 2024
ಬೆಳಗಾವಿ

ನಿಪ್ಪಾಣಿ ರಾಮಮಂದಿರದ ಒಂದೇ ಒಂದು ಕಲ್ಲನ್ನು ಕೂಡ ಅಲುಗಾಡಿಸಲು ಆಗಲ್ಲ: ಮುತಾಲಿಕ್

ನಿಪ್ಪಾಣಿ ರಾಮಮಂದಿರವನ್ನು ಸ್ಪೋಟಿಸುತ್ತೇವೆ ಎಂಬ ಬೆದರಿಕೆ ಪತ್ರಕ್ಕೆ ಶ್ರೀರಾಮಸೇನೆ ಸಂಸ್ಥಾಪಕ ಪ್ರಮೋದ್ ಮುತಾಲಿಕ್  ಸವಾಲ್ ಹಾಕಿದ್ದು, ಮಂದಿರದ ಒಂದೇ ಒಂದು ಕಲ್ಲನ್ನು ಕೂಡ ಅಲುಗಾಡಿಸಲು ಆಗಲ್ಲ. ನಿಮಗೆ ತಾಕತ್ತಿದ್ದರೆ ಮುಟ್ಟಿ ನೋಡೋಣ ಎಂದಿದ್ದಾರೆ.
Photo Credit : News Kannada

ಬೆಳಗಾವಿ: ನಿಪ್ಪಾಣಿ ರಾಮಮಂದಿರವನ್ನು ಸ್ಪೋಟಿಸುತ್ತೇವೆ ಎಂಬ ಬೆದರಿಕೆ ಪತ್ರಕ್ಕೆ ಶ್ರೀರಾಮಸೇನೆ ಸಂಸ್ಥಾಪಕ ಪ್ರಮೋದ್ ಮುತಾಲಿಕ್  ಸವಾಲ್ ಹಾಕಿದ್ದು, ಮಂದಿರದ ಒಂದೇ ಒಂದು ಕಲ್ಲನ್ನು ಕೂಡ ಅಲುಗಾಡಿಸಲು ಆಗಲ್ಲ. ನಿಮಗೆ ತಾಕತ್ತಿದ್ದರೆ ಮುಟ್ಟಿ ನೋಡೋಣ ಎಂದಿದ್ದಾರೆ.

ಈ ಕುರಿತು ವೀಡಿಯೋ ಹೇಳಿಕೆ ಬಿಡುಗಡೆ ಮಾಡಿದ ಅವರು, ರಾಮ ಮಂದಿರ ಸ್ಫೋಟ ಮಾಡುತ್ತೇವೆ ಎಂಬ ಬೆದರಿಕೆ ಪತ್ರ  ಬರೆಯಲಾಗಿದೆ.  ಕಿಡಿಗೇಡಿಗಳು ಪತ್ರ ಬರೆದಿದ್ದನ್ನ ಖಂಡಿಸುತ್ತೇನೆ, ವಿರೋಧಿಸುತ್ತೇನೆ, ಸವಾಲು ಹಾಕುತ್ತೇನೆ. ರಾಮಮಂದಿರ ಮುಟ್ಟಿದ್ರೆ ಮುಂದಿನ ಸ್ಥಿತಿ ಏನಾಗುತ್ತದೆ, ಹಿಂದೂ ಸಮಾಜ ಹೇಗೆ ತಿರುಗೇಟು ಕೊಡುತ್ತದೆ ಎಂದು ನೋಡಿ ಎಂದು ಎಚ್ಚರಿಕೆ ನೀಡಿದರು. ಇದೇ ವೇಳೆ ಎಲ್ಲ ರಾಮ ಮಂದಿರಗಳಿಗೂ ಸರ್ಕಾರ ಭದ್ರತೆ ಕೊಡಬೇಕು ಎಂದು ಮುತಾಲಿಕ್ ಆಗ್ರಹಿಸಿದರು.

ಈ ರೀತಿಯ ಬೆದರಿಕೆಯನ್ನು ಹಿಂದೂ ಸಮಾಜ ಸಹಿಸಲ್ಲ, ಹೆದರುವುದೂ ಇಲ್ಲ. ಈಗ ಘಜನಿ, ಘೋರಿ ಬಾಬಾ ಇಲ್ಲ. ಇಲ್ಲಿ ಇರೋದು ಭಾರತೀಯ ಮುಸ್ಲಿಮರು ಅನ್ನೋದು ನೆನಪಿರಲಿ. ಭಾರತದಲ್ಲಿ ಹಿಂದೂ ದೇವಾಲಯಗಳನ್ನು ಪೂಜಿಸಬೇಕು ಅಂತೇನಿಲ್ಲ, ಗೌರವಿಸಬೇಕು ಎಂದರು.

ರಾಮಮಂದಿರವನ್ನು ದೊಡ್ಡ ಪ್ರಮಾಣದಲ್ಲಿ ಸ್ಫೋಟಿಸುತ್ತೇವೆ ಎಂದು ಬೆದರಿಕೆ ಪತ್ರ ಬರೆದು ಮಂದಿರದಲ್ಲಿ ಅನಾಮಧೇಯ ವ್ಯಕ್ತಿಗಳು ಬಿಟ್ಟು ಹೋಗಿದ್ದಾರೆ. ಫೆಬ್ರವರಿ 7 ಹಾಗೂ 28ರಂದು ಬಂದ ಬೆದರಿಕೆ ಪತ್ರಗಳು ಈಗ ಬಹಿರಂಗವಾಗಿದ್ದು, ಮಾರ್ಚ್ 20-21ಕ್ಕೆ ಬಾಂಬ್ ಸ್ಫೋಟಿಸುವುದಾಗಿ ಪತ್ರದಲ್ಲಿ ಉಲೇಖಿಸಲಾಗಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು