ಬೆಳಗಾವಿ: ಜಗತ್ತಿನ ಆಗುಹೋಗುಗಳ ಭವಿಷ್ಯ ಹೇಳುವುದರಲ್ಲಿ ಪ್ರಸಿದ್ಧರಾಗಿರುವ ಕೋಡಿಮಠದ ಡಾ.ಶಿವಾನಂದ ಸ್ವಾಮೀಜಿ ಅವರು ಮತ್ತೊಂದು ಆಘಾತಕಾರಿ ಭವಿಷ್ಯ ನುಡಿದಿದ್ದಾರೆ.
ಶ್ರಾವಣ ಮಾಸದ ಮಧ್ಯಂತರದಲ್ಲಿ ಜಾಗತಿಕ ಮಟ್ಟದಲ್ಲಿ ವಿಪರೀತ ಮಳೆಯಾಗಲಿದೆ. ಅಂತಾರಾಷ್ಟ್ರೀಯ ಮಟ್ಟದಲ್ಲಿ ಯುದ್ಧ ಭೀತಿಯಿದೆ. ಭೂಕಂಪಗಳು, ಸುನಾಮಿಗಳಿಂದ ಹೆಚ್ಚಿನ ಜನರ ಸಾವು ನೋವು ಸಂಭವಿಸುತ್ತೆ ಎಂದು ಭಯಾನಕ ಭವಿಷ್ಯ ನುಡಿದಿದ್ದಾರೆ. ಬೆಳಗಾವಿಯಲ್ಲಿ ಮಾತನಾಡಿರುವ ಶ್ರೀಗಳು, ವಿಷಾನೀಲ ಬೀಸುವ ಪ್ರಸಂಗವೂ ಇದೆ. ಅದು ಎಲ್ಲ ಕಡೆಯೂ ವ್ಯಾಪಿಸಲಿದೆ. ವಿಪರೀತ ಮಳೆಯಿಂದ ಎರಡು ದೇಶಗಳು ನಾಶವಾಗುತ್ತವೆ. ಭಾರತದಲ್ಲಿ ಜಲಪ್ರಳಯ ಆಗುವ ಲಕ್ಷಣಗಳಿವೆ.
ದಕ್ಷಿಣ ಭಾರತದಲ್ಲಿ ಸಮೃದ್ಧಿಯ ಲಕ್ಷಣಗಳಿವೆ, ಯಾವುದೇ ತೊಂದರೆಯಿಲ್ಲ. ಭೂಕಂಪನದಿಂದ ದೊಡ್ಡ ದೊಡ್ಡ ನಗರಗಳಿಗೆ ಅಪಾಯ. ಇದ್ದಕ್ಕಿದ್ದಂತೆ ಜನರ ಸಾವಾಗುವ ಆತಂಕವಿದೆ. ಜಾಗತಿಕ ಮಟ್ಟದಲ್ಲಿ ವಿಶಾನಿಲದ ಪರಿಣಾಮ ಭಾರತದ ಮೇಲೂ ಆಗಲಿದೆ. ಜಗತ್ತಿನ ಸಾಮ್ರಾಟ್ಗಳ ತಲ್ಲಣಗೊಳ್ಳುವ ಪ್ರಸಂಗವೂ ಇದೆ. ಅದರ ಬಗ್ಗೆ ಜನರು ಎಚ್ಚರಿಕೆ ವಹಿಸಬೇಕು ಎಂದಿದ್ದಾರೆ. ಅದೇ ರೀತಿ ಚಂದ್ರಯಾನದ ಕುರಿತು ಭವಿಷ್ಯ ನುಡಿದಿದ್ದು, ಚಂದ್ರಯಾನ-3 ಯಶಸ್ವಿಯಾಗಿ ಒಳ್ಳೆಯದಾಗಲಿದೆ ಎಂದು ಹೇಳಿದ್ದಾರೆ.