ಬೆಳಗಾವಿ: ಬೆಳಗಾವಿ ಜಿಲ್ಲೆ ರಾಮದುರ್ಗ ತಾಲೂಕಿನ ಸಾಲಹಳ್ಳಿ ಬಳಿ ಎತ್ತಿನಗಾಡಿಗೆ ತರಕಾರಿ ವಾಹನ ಹಿಂದಿನಿಂದ ಬಂದು ಡಿಕ್ಕಿ ಹೊಡೆದು ಭೀಕರ ಅಪಘಾತ ಸಂಭವಿಸಿದೆ.
ಅಪಘಾತದಲ್ಲಿ ಸಾಲಹಳ್ಳಿ ಗ್ರಾಮದ ಯಮನವ್ಚ ಮಡ್ಡಿ(42) ಸ್ಥಳದಲ್ಲಿ ಸಾವನ್ನಪ್ಪಿದ್ದಾರೆ.
ಯಮನವ್ಚ ಮಡ್ಡಿ ಸೇರಿ ನಾಲ್ವರು ಎತ್ತಿನಬಂಡಿಯಲ್ಲಿ ಹೋಲಕ್ಕೆ ಜೋಳದ ರಾಶಿ ಮಾಡಲು ಹೋಗುತ್ತಿದ್ದರು. ಈ ವೇಳೆ ಬೆಳಗಾವಿ-ಬಾಗಲಕೋಟೆ ರಾಜ್ಯ ಹೆದ್ಧಾರಿಯಲ್ಲಿ ಅಪಘಾತ ನಡೆದಿದೆ.
ಅಪಘಾತದಲ್ಲಿ ಎತ್ತು ಸೇರಿ ನಾಲ್ವರಿಗೆ ಗಂಭೀರ ಗಾಯವಾಗಿದೆ. ಸ್ಥಳಕ್ಕೆ ಕಡಕೋಳ ಪೋಲಿಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.