ಬೆಳಗಾವಿ: ಬೆಳಗಾವಿಯ ಸುವರ್ಣಸೌಧದಲ್ಲಿ ಚಳಿಗಾಲದ ಅಧಿವೇಶನ 6 ನೆೇ ದಿನಕ್ಕೆ ಕಾಲಿಟ್ಟಿದ್ದು, ಸುವರ್ಣಸೌಧದ ಹೊರಗೆ ಪ್ರತಿಭಟನೆ ಕಾವು ಕಡಿಮೆ ಆಗಿಲ್ಲ.
ಅನೇಕ ಸಂಘಟನೆಗಳು ಇಂದು ಸಾಲು ಸಾಲು 13 ಪ್ರತಿಭಟನೆಗಳನ್ನು ಹಮ್ಮಿಕೊಂಡಿವೆ. ಇನ್ನು ಮತ್ತೊಂದೆಡೆ ಮತ್ತೆ ಬೆಳಗಾವಿ ಜಿಲ್ಲೆ ವಿಭಜನೆ ಕೂಗು ಕೇಳಿ ಬಂದಿದ್ದು ಅಥಣಿ ಜಿಲ್ಲೆ ಮಾಡುವಂತೆ ಒತ್ತಾಯಿಸಿ ಇಂದು ಅಥಣಿ ಬಂದ್ಗೆ ಕರೆ ಕೊಡಲಾಗಿದೆ
ಜೊತೆಗೆ ಮತ್ತೆ ಬೆಳಗಾವಿ ಜಿಲ್ಲೆ ವಿಭಜನೆ ಕೂಗು ಕೇಳಿ ಬಂದಿದ್ದು ಅಥಣಿ ಜಿಲ್ಲೆ ಮಾಡುವಂತೆ ಒತ್ತಾಯಿಸಿ ಇಂದು ಅಥಣಿ ಬಂದ್ಗೆ ಕರೆ ಕೊಡಲಾಗಿದೆ. ಅಥಣಿ ಜಿಲ್ಲಾ ಹೋರಾಟ ಸಮಿತಿ ಸ್ವಯಂ ಪ್ರೇರಿತ ಬಂದ್ಗೆ ಕರೆ ಕೊಟ್ಟಿದ್ದು ಹೋರಾಟ ಸಮಿತಿ ಅಧ್ಯಕ್ಷ ಪ್ರಶಾಂತ ತೋಡ್ಕರ್ ನೇತೃತ್ವದಲ್ಲಿ ಪ್ರತಿಭಟನಾ ಮೆರವಣಿಗೆ ನಡೆಯುತ್ತಿದೆ.
ಕರ್ನಾಟಕ ರಾಜ್ಯ ರೈತ ಸಂಘಟನೆಗಳ ರೈತ ಒಕ್ಕೂಟ ಪ್ರತಿಭಟನೆ ನಡೆಸಲಿದೆ. ರೈತರ ಸಾಲಮನ್ನಾ, 10 ಗಂಟೆ ವಿದ್ಯುತ್, ಮೂರು ರೈತ ವಿರೋಧಿ ಕಾನೂನು ವಾಪಸ್ ಪಡೆಯುವಂತೆ ರೈತರು ಗಾಂಧಿನಗರದಿಂದ ಸುವರ್ಣಸೌಧದ ವರೆಗೂ ಪಾದಯಾತ್ರೆ ಮಾಡಲಿದ್ದಾರೆ.
ಪ್ರತಿಭಟನೆಗಳು:
ಪರಿಶಿಷ್ಟ ಜಾತಿ, ಒಳ ಮೀಸಲಾತಿ, ವರ್ಗೀಕರಣ ಪರಿಷ್ಕೃತ ಶಿಫಾರಸ್ಸು ಆದೇಶ ಕೇಂದ್ರಕ್ಕೆ ಕಳುಹಿಸಲು ಒತ್ತಾಯಿಸಿ ಪರಿಶಿಷ್ಟ ಜಾತಿ ಒಳ ಮೀಸಲಾತಿ ಸಮಿತಿಯಿಂದ ಪ್ರತಿಭಟನೆ.
ಕಾಂತರಾಜ್ ಆಯೋಗದ ವರದಿ ಬಿಡುಗಡೆ, ಸದಾಶಿವ ಆಯೋಗದ ವರದಿ ಕೇಂದ್ರಕ್ಕೆ ಶಿಫಾರಸ್ಸಿಗೆ ಒತ್ತಾಯಿ ಸೋಷಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾದಿಂದ ಪ್ರತಿಭಟನೆ.
ಉದ್ಯೋಗ, ಯೋಜನೆಗಳಲ್ಲಿ ಮೀಸಲಾತಿಗೆ ಒತ್ತಾಯಿಸಿ ಅಖಿಲ ಕರ್ನಾಟಕ ಸ್ವಾತಂತ್ರ್ಯ ಯೋಧರ ಉತ್ತರಾಧಿಕಾರಿ ಸಂಘದಿಂದ ಪ್ರತಿಭಟನೆ.
ಉತ್ತರ ಕರ್ನಾಟಕದಲ್ಲಿ ಪ್ರತ್ಯೇಕ ವಕ್ಫ್ ಬೋರ್ಡ್ ಸ್ಥಾಪಿಸಲು ಆಗ್ರಹಿಸಿ ಹುಬ್ಬಳ್ಳಿಯ ಉತ್ತರ ಕರ್ನಾಟಕ ಅಂಜುಮನ್ -ಎ-ಇಸ್ಲಾಮ್ ದಿಂದ ಹೋರಾಟ.
ಸರ್ಕಾರದಿಂದ ತರಬೇತಿ ನೀಡಿ ಮಾನ್ಯತೆ ನೀಡಲು ಒತ್ತಾಯಿಸಿ ಕರ್ನಾಟಕ ರಾಜ್ಯ ಗ್ರಾಮೀಣ ಪ್ರಥಮ ಚಿಕಿತ್ಸಾ ವೈದರ ಸಂಘದಿಂದ ಪ್ರತಿಭಟನೆ.
ವಿವಿಧ ಬೇಡಿಕೆಗೆ ಒತ್ತಾಯಿಸಿ ಛಲವಾದಿ ಮಹಾಸಭಾ, ಕರ್ನಾಟಕ ಸಮತಾ ಸೈನಿಕ ದಳ, ಕರ್ನಾಟಕ ಛಾಯಾ ಚಿತ್ರಗ್ರಾಹಕರ ಸಂಘದಿಂದ ಮನವಿ ಸಲ್ಲಿಕೆ.
ಖಾಸಗಿ ಶಾಲೆಗಳಲ್ಲಿ ಶೇ.25 ರಷ್ಟು ಆರ್ಟಿಐ ಮಕ್ಕಳ ದಾಖಲಾತಿ ಮರು ಅನುಷ್ಠಾನಕ್ಕೆ ಒತ್ತಾಯಿಸಿ ಮಾನ್ಯತೆ ಪಡೆದ ಅನುದಾನ ರಹಿತ ಖಾಸಗಿ ಶಾಲೆಗಳ ಸಂಘದಿಂದ ಹೋರಾಟ.