ಬೆಳಗಾವಿ: ಸಿದ್ದರಾಮಯ್ಯ ವಿರುದ್ಧ ರಾಜ್ಯ ಚುನಾವಣೆ ಆಯೋಗಕ್ಕೆ ದೂರು ನೀಡಿದರೂ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಆರ್ಟಿಐ ಕಾರ್ಯಕರ್ತರೊಬ್ಬರು ಕೇಂದ್ರ ಚುನಾವಣಾ ಆಯೋಗಕ್ಕೆ ದೂರು ನೀಡಿದ್ದಾರೆ.
ಕಳೆದ ಬಾರಿ ವಿಧಾನಸಭೆ ಚುನಾವಣೆ ವೇಳೆ ವರುಣಾ ಕ್ಷೇತ್ರದ ಮತದಾರರಿಗೆ ಸಿಎಂ ಸಿದ್ದರಾಮಯ್ಯ ಕುಕ್ಕರ್, ಐರನ್ ಬಾಕ್ಸ್ ಹಂಚಿಕೆ ಮಾಡಿದ್ದಾರೆ ಎಂದು ಆರ್ಟಿಐ ಕಾರ್ಯಕರ್ತ ಭೀಮಪ್ಪ ಗಡಾದ್ ಅರೋಪಿಸಿದ್ದಾರೆ. ಜತೆಗೆ, ರಾಜ್ಯ ಮುಖ್ಯ ಚುನಾವಣಾಧಿಕಾರಿ ಮೇಲೆ ಕ್ರಮ ಜರುಗಿಸಲು ಒತ್ತಾಯಿಸಿ ಕೇಂದ್ರ ಚುನಾವಣಾ ಆಯೋಗಕ್ಕೆ ದೂರು ನೀಡಿದ್ದಾರೆ.
ಈ ಕುರಿತು ಬೆಳಗಾವಿಯ ಕನ್ನಡ ಸಾಹಿತ್ಯ ಭವನದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಭೀಮಪ್ಪ ಗಡಾದ್, ಕೇಂದ್ರ ಚುನಾವಣಾ ಆಯೋಗವೂ ಕ್ರಮ ಕೈಗೊಳ್ಳದಿದ್ದರೆ ಕಾನೂನು ಹೋರಾಟ ನಡೆಸುವುದಾಗಿ ಎಚ್ಚರಿಕೆ ನೀಡಿದ್ದಾರೆ.
ದಾಖಲೆ ಸಮೇತ ದೂರು ನೀಡಿದರೂ ರಾಜ್ಯ ಚುನಾವಣೆ ಆಯೋಗದ ಮುಖ್ಯ ಚುನಾವಣಾಧಿಕಾರಿ ಕ್ರಮ ಕೈಗೊಳ್ಳುತ್ತಿಲ್ಲ. ಬದಲಿಗೆ, ‘ದೂರು ಅರ್ಜಿಯ ಕುರಿತು ಭಾರತ ಚುನಾವಣೆ ಆಯೋಗದ ಮಾರ್ಗದರ್ಶನ ಕೋರಲಾಗಿದೆ’ ಎಂದು ಲಿಖಿತ ಉತ್ತರ ನೀಡಿದ್ದಾರೆ.
ಪ್ರಜಾಪ್ರತಿನಿಧಿ ಕಾಯ್ದೆ ಉಲ್ಲಂಘನೆ ಆಗಿದ್ದು ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದ್ದೆವು. ಸೆಪ್ಟೆಂಬರ್ 21ರಂದು ರಾಜ್ಯ ಚುನಾವಣೆ ಆಯೋಗಕ್ಕೆ ಪತ್ರ ಬರೆದ್ದೆವು. ಇದಕ್ಕೆ, ಅಕ್ಟೋಬರ್ 4ರಂದು ದೂರು ಅರ್ಜಿ ಬಗ್ಗೆ ಕೇಂದ್ರ ಚುನಾವಣೆ ಆಯೋಗದ ಮಾರ್ಗದರ್ಶನ ಕೇಳಿದ್ದಾಗಿ ಲಿಖಿತ ಉತ್ತರ ನೀಡಿದ್ದಾರೆ. ಕೇಂದ್ರ ಚುನಾವಣೆ ಆಯೋಗದ ಮಾರ್ಗದರ್ಶನ ಕೋರಿ ಬರೆದ ಪತ್ರದ ನಕಲು ಪ್ರತಿ ನೀಡುವಂತೆ ಡಿಸೆಂಬರ್ 1ರಂದು ರಾಜ್ಯ ಚುನಾವಣೆ ಆಯೋಗಕ್ಕೆ ಪತ್ರ ಬರೆದಿದ್ದೆವು. ಆಗ, ಆಯೋಗದಿಂದ ಕೋರಲಾದ ಮಾರ್ಗದರ್ಶನಕ್ಕೆ ಸಂಬಂಧಿಸಿದ ಪ್ರತಿ ಇನ್ನೂ ಸ್ವೀಕೃತವಾಗಿಲ್ಲ. ಸ್ವೀಕೃತವಾದ ಬಳಿಕ ಮಾಹಿತಿ ನೀಡುವುದಾಗಿ ಲಿಖಿತ ಉತ್ತರ ನೀಡಿದ್ದರು ಎಂದು ಹೇಳಿದರು.
ಅಮೆರಿಕ ವಿರೋಧಿ ನಿಲುವುಗಳನ್ನು ಹೊಂದಿರುವ ತೀವ್ರ ಎಡಪಂಥೀಯ ನಾಯಕ, ಸ್ಲೊವಾಕಿಯಾ ಪ್ರಧಾನ ಮಂತ್ರಿ ರಾಬರ್ಟ್ ಫಿಕೊ ಹತ್ಯೆ ಯತ್ನಬುಧವಾರ ನಡೆದಿದೆ.…
ಪದವೀಧರ ಹಾಗೂ ಶಿಕ್ಷಕರ ಕ್ಷೇತ್ರಗಳ ವಿಧಾನ ಪರಿಷತ್ತಿನ ಆರು ಸ್ಥಾನಗಳಿಗೆ ನಡೆಯಲಿರುವ ಚುನಾವಣೆಗೆ ನಾಮಪತ್ರ ಸಲ್ಲಿಸಲು ಗುರುವಾರ ಕೊನೆಯ ದಿನ.…
ವೈದ್ಯರ ಎಡವಟ್ಟಿಗೆ ಆಸ್ಪತ್ರೆಯಲ್ಲಿ ರೋಗಿ ಸಾವನಪ್ಪಿರುವ ಘಟನೆ ಪುತ್ತೂರಿನ ಖಾಸಗಿ ಆಸ್ಪತ್ರೆಯಲ್ಲಿ ನಡೆದಿದೆ.ಕೃಷ್ಣಪ್ಪ ಗೌಡ(47) ಮೃತ ವ್ಯಕ್ತಿ. ಬಂಟ್ವಾಳ ತಾಲೂಕಿನ…
ತಡರಾತ್ರಿ ಇಲ್ಲ ಮುಂಜಾವರೆಗೂ ಕೆಲವರು ನಿದ್ದೆ ಗೆಡುತ್ತಾರೆ ಇದೊಂದು ಈಗಿನ ಜಯಮಾನದ ಸಾಮಾನ್ಯ ಅಭ್ಯಾಸವಾಗಿದೆ.ಕೆಲಸದ ಒತ್ತಡ, ಕಚೇರಿಯ ಕೆಲಸಗಳು, ಸಾಮಾಜಿಕ…
ಪ್ರಧಾನಿ ನರೇಂದ್ರ ಮೋದಿ ಅವರ ವಿರುದ್ಧ ವಾರಣಾಸಿ ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸಿದ್ದ ಸ್ಟ್ಯಾಂಡಪ್ ಕಾಮಿಡಿಯನ್ ಶ್ಯಾಮ್ ರಂಗೀಲಾ ಅವರ ನಾಮಪತ್ರ…
ಈ ಹಣ್ಣು ಹುಳಿ ರುಚಿಯನ್ನು ಹೊಂದಿದ್ದರೂ ಆರೋಗ್ಯ ವಿಚಾರದಲ್ಲಿ ಸಿಹಿ ಗುಣಗಳನ್ನು ಹೊಂದಿದೆ. ಇದನ್ನು ಬೆಳೆಯಲು ಉಷ್ಣ ವಲಯ ಅತ್ಯುತ್ತಮ.…