ಸುವರ್ಣಸೌಧ: ಬೆಳಗಾವಿಯಲ್ಲಿ ಅಧಿವೇಶನ ಕರೆದಿದ್ದೀರಿ. ಆದರೆ ಬೆಂಗಳೂರು ಸಮಸ್ಯೆ ಬಗ್ಗೆ ಮಾತನಾಡಿದ್ರೆ ಹೇಗೆ? ಇಲ್ಲಿ ಅಧಿವೇಶನ ಕರೆದಿದ್ದು ಈ ಭಾಗದ ಕುರಿತು ಚರ್ಚೆ ಮಾಡೋದಕ್ಕೆ ಅಲ್ಲವೇ? ಎಂದುವಿಧಾನಸಭೆ ಕಲಾಪದ ವೇಳೆ ಸ್ಪೀಕರ್ ಯುಟಿ ಖಾದರ್ ವಿರುದ್ಧ ಕಾಂಗ್ರೆಸ್ ಸದಸ್ಯ ಲಕ್ಷ್ಮಣ್ ಸವದಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಉತ್ತರ ಕರ್ನಾಟಕದಲ್ಲಿ ಸಾಕಷ್ಟು ಸಮಸ್ಯೆಗಳಿವೆ. ರೈತರಿಗೆ ಅನ್ಯಾಯ ಆಗುತ್ತಿದೆ. ಕಬ್ಬು ಬೆಳೆಗೆ ಬೆಲೆ ಸಿಗುತ್ತಿಲ್ಲ, ತೂಕದಲ್ಲಿ ವ್ಯತ್ಯಾಸ ಆಗುತ್ತಿದೆ. ಅದು ಬಿಟ್ಟು ಕೊಬ್ಬರಿ ಬೆಲೆ ಬಗ್ಗೆ ಚರ್ಚೆಗೆ ಅವಕಾಶ ಕೊಡ್ತಿದ್ದೀರಿ ಎಂದು ಹೇಳಿದ್ದಾರೆ.
ಇದಕ್ಕೆ ಪ್ರತಿಕ್ರಿಯೆ ನೀಡಿದ ಸ್ಪೀಕರ್ ಖಾದರ್, ಈ ಸದನ ಕರೆದಿದ್ದು ರಾಜ್ಯದ ಸಮಸ್ಯೆಗಳ ಜೊತೆಗೆ ಉತ್ತರ ಕರ್ನಾಟಕ ಬಗ್ಗೆ ಚರ್ಚೆ ನಡೆಸಲಿ ಇದ್ದೇವೆ. ಎಲ್ಲರ ಸಹಕಾರ ಇದ್ದರೆ ಬೇಗ, ಚರ್ಚೆಗೆ ಅವಕಾಶ ಕೊಡಬಹುದು. ಈಗಾಗಲೇ ಬರಗಾಲದ ಚರ್ಚೆ ಆರಂಭವಾಗಿದೆ. ಅದು ಮುಗಿದ ಬಳಿಕ ಉತ್ತರ ಕರ್ನಾಟಕದ ಸಮಸ್ಯೆ ಕುರಿತು ಚರ್ಚಿಸೋಣ ಎಂದು ಸ್ಪೀಕರ್ ಹೇಳಿದರು.