ದಾವಣಗೆರೆ :ಯುದ್ಧದಿಂದಾಗಿ ಉಕ್ರೇನ್ನಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದ ರಾಜ್ಯದ ವಿದ್ಯಾರ್ಥಿಗಳು ವಿದ್ಯಾಭ್ಯಾಸ ಮೊಟಕುಗೊಳಿಸಿ ವಾಪಸಾಗಿದ್ದಾರೆ. ಅಲ್ಲಿ ಕೋರ್ಸ್ ಮುಗಿಸಿದರೂ ಮತ್ತೆ ಇಲ್ಲಿ ಪರೀಕ್ಷೆ ನಡೆಯಬೇಕು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.
ಮುಂದಿನ ಅವರ ವಿದ್ಯಾಭ್ಯಾಸದ ಬಗ್ಗೆ ಕೇಂದ್ರ ಸರ್ಕಾರ ಗಂಭೀರ ಚಿಂತನೆ ನಡೆಸಿದೆ ಎಲ್ಲ ರಾಜ್ಯಗಳಲ್ಲೂ ಉಕ್ರೇನ್ನಿಂದ ಬಂದ ವಿದ್ಯಾರ್ಥಿಗಳಿದ್ದಾರೆ. ಇವರ ವಿದ್ಯಾಭ್ಯಾಸದ ಬಗ್ಗೆ ಕೇಂದ್ರ ಸರ್ಕಾರ ಗಂಭೀರ ಚಿಂತನೆ ನಡೆಸಿದೆ.
ರಾಜ್ಯದಲ್ಲಿ ವೈದ್ಯಕೀಯ ಶಿಕ್ಷಣದ ವೆಚ್ಚ ಹೆಚ್ಚಾಗುತ್ತಿದೆ. ಇದರ ಬಗ್ಗೆ ಈಗಾಗಲೇ ಚರ್ಚೆ ನಡೆಯುತ್ತಿದ್ದು, ಈ ಬಗ್ಗೆ ಮುಂದಿನ ದಿನಗಳಲ್ಲಿ ಪರಿಶೀಲಿಸಿ ಕ್ರಮ ಕೈಗೊಳ್ಳಲಾಗುವುದು. ನಮ್ಮ ರಾಜ್ಯದಲ್ಲಿ ಎ, ಬಿ, ಸಿ ಕೆಟಗರಿ ಮಾಡಲು ತೀರ್ಮಾನ ಮಾಡಿದ್ದೇವೆ. ಉಕ್ರೇನ್ನಿಂದ ಮರಳಿದ ವಿದ್ಯಾರ್ಥಿಗಳ ಹಿತ ಕಾಯುವ ಬಗ್ಗೆ ರಾಷ್ಟ್ರೀಯ ವೈದ್ಯಕೀಯ ಪರೀಕ್ಷೆ ಚಿಂತನೆ ನಡೆಸಿದ್ದು, ವಿದ್ಯಾರ್ಥಿಗಳು ಆತಂಕಕ್ಕೆ ಒಳಗಾಗಬಾರದು ಎಂದು ಅಭಯ ನೀಡಿದರು.
ಆಪರೇಷನ್ ಗಂಗಾ ಯೋಜನೆಯಲ್ಲಿ 572 ಕನ್ನಡಿಗರನ್ನು ವಾಪಸ್ ಕರೆತರಲಾಗಿದೆ. ಯುದ್ಧಭೂಮಿಯಲ್ಲಿ ನಮ್ಮ ರಾಷ್ಟ್ರಧ್ವಜವನ್ನು ಹಿಡಿದರೆ ಸಾಕು, ಗೌರವ ಕೊಟ್ಟು ಬಿಟ್ಟು ಬಿಡುತ್ತಿದ್ದರು. ಇದರಿಂದಲೇ ಗೊತ್ತಾಗುತ್ತದೆ ನಮ್ಮ ದೇಶದ ಶಕ್ತಿ ಎಂತಹದ್ದು ಎಂದು ಹೆಮ್ಮೆಪಟ್ಟರು.
ಅಲ್ಲಿನ ದೇಶದ ಸಹಕಾರ ಪಡೆಯುವುದು ಅಷ್ಟು ಸುಲಭವಲ್ಲ, ಪ್ರಧಾನಿ ನರೇಂದ್ರ ಮೋದಿ ಅವರ ವರ್ಚಸ್ಸಿನಿಂದಾಗಿ ಕನ್ನಡಿಗರು ವಾಪಸ್ ಬರಲು ಸಾಧ್ಯವಾಯಿತು ಎಂದರು.