ಧಾರವಾಡ :ಧಾರವಾಡ ಜಿಲ್ಲೆಯ ಕುಂದಗೋಳ ತಾಲೂಕು ಯರಗುಪ್ಪಿ ಗ್ರಾಮದ ವೈದ್ಯಕೀಯ ವಿದ್ಯಾರ್ಥಿನಿ ಚೈತ್ರಾ ಗಂಗಾಧರ ಸಂಶಿ ಉಕ್ರೇನ್ನಿಂದ ಸುರಕ್ಷಿತವಾಗಿ ವಾಪಸ್ ಆಗಿದ್ದಾರೆ.ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ವಿದ್ಯಾರ್ಥಿನಿಯನ್ನು ಬರಮಾಡಿಕೊಂಡರು. ಸಿಹಿ ತಿನ್ನಿಸಿ ಆಕೆಯನ್ನು ಬರಮಾಡಿಕೊಂಡು ಶುಭ ಹಾರೈಸಿದರು.
ಮಾರ್ಚ್ 2ರ ಬುಧವಾರ ಧಾರವಾಡ ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಚೈತ್ರಾ ಗಂಗಾಧರ ಸಂಶಿ ನಿವಾಸಕ್ಕೆ ಭೇಟಿ ನೀಡಿದ್ದರು. ಭೇಟಿಯ ಸಂದರ್ಭದಲ್ಲಿಯೇ ತನ್ನ ಪಾಲಕರಿಗೆ ವೀಡಿಯೋ ಕರೆ ಮಾಡಿದ್ದ ಚೈತ್ರಾ ಸಂಶಿ ಜೊತೆ ಜಿಲ್ಲಾಧಿಕಾರಿಗಳು ಮಾತನಾಡಿ, ವಿದ್ಯಾರ್ಥಿನಿಗೆ ಭರವಸೆ ತುಂಬಿದ್ದರು.
ಚೈತ್ರಾ ಸಂಶಿ ರೈಲಿನ ಮೂಲಕ ಪೋಲೆಂಡ್ ದೇಶದ ಗಡಿಗೆ ಆಗಮಿಸುತ್ತಿದ್ದರು. ಅಲ್ಲಿಂದ ಆಪರೇಷನ್ ಗಂಗಾ ವಿಶೇಷ ವಿಮಾನದ ಮೂಲಕ ದೆಹಲಿಗೆ ಆಗಮಿಸಿದ್ದು, ಅಲ್ಲಿಂದ ಭಾನುವಾರ ಬೆಳಗ್ಗೆ ಹುಬ್ಬಳ್ಳಿ ವಿಮಾನ ನಿಲ್ದಾಣಕ್ಕೆ ಆಗಮಿಸಿದ್ದಾರೆ.