ಹುಬ್ಬಳ್ಳಿ: ತಾಲೂಕಿನ ಶಿರಗುಪ್ಪಿ ಬಳಿ ಐರಾವತ ಬಸ್ ಹಾಗೂ ಕಾರು ನಡುವೆ ಮುಖಾಮುಖಿ ಢಿಕ್ಕಿ ಸಂಭವಿಸಿ, ಕಾರು ಚಾಲಕ ಹಾಗೂ ಅವರ ತಾಯಿ ಸ್ಥಳದಲ್ಲೇ ಮೃತಪಟ್ಟು,ಐವರು ಗಾಯಗೊಂಡಿರುವ ಘಟನೆ ನಡೆದಿದೆ.
ಅಪಘಾತದಲ್ಲಿ ಮೃತಪಟ್ಟವರು ಗುಜರಾತ್ ಮೂಲದ ಹುಬ್ಬಳ್ಳಿ ನಿವಾಸಿಗಳಾಗಿದ್ದಾರೆ ಎಂದು ತಿಳಿದು ಬಂದಿದೆ.
ಹುಬ್ಬಳ್ಳಿಯಿಂದ ಹಂಪಿಗೆ ಮಹೀಂದ್ರಾ ವಾಹನದಲ್ಲಿ ಕುಟುಂಬ ಸಮೇತರಾಗಿ ಹೊರಟಿದ್ದಾಗ ಗದಗ ಕಡೆಯಿಂದ ಹುಬ್ಬಳ್ಳಿ ಕಡಗೆ ವೇಗವಾಗಿ ರಾಂಗ್ ಸೈಡ್ ನಲ್ಲಿ ಬರುತ್ತಿದ್ದ ಐರಾವತ ಬಸ್ ಢಿಕ್ಕಿ ಹೊಡೆದಿದ್ದರಿಂದ ಅವಘಡ ಸಂಭವಿಸಿದೆ.
ಗಾಯಾಳುಗಳು ಕಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಸ್ಥಳಕ್ಕೆ ಗ್ರಾಮೀಣ ಠಾಣೆ ಇನ್ಸ್ ಪೆಕ್ಟರ್ ರಮೇಶ ಗೋಕಾಕ ಮತ್ತು ಸಿಬ್ಬಂದಿ ತೆರಳಿದ್ದಾರೆ.