ಹುಬ್ಬಳ್ಳಿ: ಒಬಿಸಿಗೆ ಮೀಸಲಾತಿ ಇಲ್ಲಾ ಅಂದರೆ ನಮಗೆ ಅನ್ಯಾಯವಾಗುತ್ತದೆ. ಕೇಂದ್ರ ಸರ್ಕಾರ ಸುಗ್ರೀವಾಜ್ಞೆ ತಂದು ಮೀಸಲಾತಿ ಉಳಿಸಬೇಕು ಎಂದು ಮಾಜಿ ಸಚಿವ ಎಚ್.ಎಂ. ರೇವಣ್ಣ ತಿಳಿಸಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸುಪ್ರೀಂ ಕೋಟ್೯ ಹಿಂದುಳಿದವರಿಗೆ ಯಾವ ಆಧಾರದ ಮೇಲೆ ಮೀಸಲಾತಿ ಕೊಡುತ್ತೀರಾ ಎಂದು ಪ್ರಶ್ನೆ ಮಾಡಿದೆ ಕೇಂದ್ರ ಕೂಡಲೇ ಇದನ್ನು ಸರಿಪಡಿಸಬೇಕು ಎಂದರು.
ಹಿಜಾಬ್ ವಿಚಾರ ನ್ಯಾಯಾಲದಲ್ಲಿದೆ. ಹೀಗಾಗಿ ಆ ಬಗ್ಗೆ ಹೆಚ್ಚಿಗೆ ಮಾತನಾಡುವುದಿಲ್ಲ. ಆದರೆ ಇದನ್ನು ಈ ಮಟ್ಟಿಗೆ ಬೆಳೆಯಲು ಬಿಡಬಾರದಿತ್ತು. ಇದರಲ್ಲಿ ಸರ್ಕಾರದ ನ್ಯೂನ್ಯತೆ ಇದೆ. ಬಿಜೆಪಿಯವರಿಗೆ ತಮ್ಮ ಸರಕಾರದ ಸಾಧನೆ ಕೇಳಿದರೆ ಏನು ಮಾತನಾಡಲ್ಲ. ಕೇವಲ ಜನರ ಭಾವನೆ ಮೇಲೆ ರಾಜಕೀಯ ಮಾಡುತ್ತಿದ್ದಾರೆ. ಜನರ ದಿಕ್ಕು ತಪ್ಪಿಸುವ ಕೆಲಸ ಮಾಡುತ್ತಿದ್ದಾರೆ ಎಂದರು.