News Karnataka Kannada
Sunday, April 28 2024
ಹುಬ್ಬಳ್ಳಿ-ಧಾರವಾಡ

ಕರೋನ 3ನೇ ಅಲೆ ಏರಿಕೆ‌‌‌ ಕಂಡರೆ ಶಾಲೆ ಸ್ಥಗಿತದ ಬಗ್ಗೆ ನಿರ್ಧಾರ: ಬಿ. ಸಿ. ನಾಗೇಶ್

B C Nagesh Minister
Photo Credit :

ದಾವಣಗೆರೆ:  ಕರೋನ 3ನೇ ಅಲೆ ಹೆಚ್ಚಾದರೆ ಶಾಲೆ ಸ್ಥಗಿತದ ಬಗ್ಗೆ ನಿರ್ಧಾರ ಮಾಡಲಾಗುವುದು ಅಂತ ಸಚಿವ ಬಿ.ಸಿ ನಾಗೇಶ್‌ ಅವರು ತಿಳಿಸಿದ್ದಾರೆ. ಅವರು ಈ ಬಗ್ಗೆ ನಗರದಲ್ಲಿ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸುತ್ತ ತಿಳಿಸಿದರು. ಇದೇ ವೇಳೆ ಅವರು ತಮ್ಮ ಮಾತನ್ನು ಮುಂದುವರೆಸಿ, ರಾಜ್ಯದಲ್ಲಿ ಹೊಸ ಶಿಕ್ಷಣ ನೀತಿಯನ್ನು ಜಾರಿಗೆ ತರಲು ಸಿದ್ಧತೆ ನಡೆಸಲಾಗಿದೆ.  ಕೊಡಗಿನ ನವೋದಯ ಶಾಲೆಯ 31 ವಿದ್ಯಾರ್ಥಿಗಳಲ್ಲಿ ಕೊರೊನಾ ಸೋಂಕು ಪತ್ತೆಯಾಗಿದ್ದು, ಆತಂಕದ ವಾತವಾರಣವನ್ನು ನಿರ್ಮಾಣ ಮಾಡಲಾಗಿದೆ. ಈ ನಡುವೆ ರಾಜ್ಯದಲ್ಲಿ ಮೂರನೇ ಬಾರಿಗೆ ಕೊರೊನಾ ಸೋಂಕು ಕಾಣಿಸಿಕೊಂಡರೆ ಶಾಲೆಗಳ ಪುನರಾರಂಭದ ಕುರಿತು ಸಮಾಲೋಚನೆ ನಡೆಸಲಾಗುವುದು ಎಂದು ಶಿಕ್ಷಣ ಸಚಿವರು ತಿಳಿಸಿದ್ದಾರೆ.

ಮದನ್ ಗೋಪಾಲ್ ನೇತೃತ್ವದಲ್ಲಿ ಟಾಸ್ಕ್ ಪೋರ್ಸ್ ರಚನೆಯಾಗಿದೆ. 0-1, 3, 9 ತರಗತಿಗಳನ್ನು ಪ್ರಾರಂಭಿಸಲು ಸಿದ್ಧತೆ ನಡೆದಿದೆ ಅಂತ ಅವರು ಇದೇ ವೇಳೆ ತಿಳಿಸಿದರು. ಶಾಲಾ ಮಕ್ಕಳ ಪಠ್ಯ ಕಡಿತದ ಬಗ್ಗೆ ಯಾವುದೇ ನಿರ್ಧಾರ ಕೈಗೊಂಡಿಲ್ಲ. ದಸರಾ ರಜೆಯ ಹಿನ್ನೆಲೆಯಲ್ಲಿ ಪೂರ್ಣಾವಧಿ ಪಠ್ಯಕ್ರಮವನ್ನು ಕಲಿಸಲಾಗುತ್ತದೆ. ಇದಕ್ಕೆ ಶಿಕ್ಷಕರು ಸಿದ್ಧರಾಗಿದ್ದಾರೆ. ಮಕ್ಕಳು ಕಲಿಯಲು ಉತ್ಸುಕರಾಗಿದ್ದಾರೆ. ಪಠ್ಯ ಕಡಿತದಿಂದ ಮುಂದಿನ ಶೈಕ್ಷಣಿಕ ವರ್ಷ ಮಕ್ಕಳಿಗೆ ತೊಂದರೆಯಾಗಲಿದೆ ಎಂದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು