News Karnataka Kannada
Monday, May 06 2024
ಹುಬ್ಬಳ್ಳಿ-ಧಾರವಾಡ

ಕಳಸಾ ಬಂಡೂರಿ ಯೋಜನೆ ಬಗ್ಗೆ ಕೇಂದ್ರ ಸಚಿವರೊಂದಿಗೆ ಚರ್ಚಿಸಿದ್ದೇನೆ: ಸಿಎಂ ಬೊಮ್ಮಾಯಿ

Cm Bommai
Photo Credit :

ಹುಬ್ಬಳ್ಳಿ: ಕಳಸಾ ಬಂಡೂರಿ ನಾಲಾ ಯೋಜನೆಗೆ ಕೇಂದ್ರ ಅರಣ್ಯ ಇಲಾಖೆ ಅನುಮೋದನೆ ಪಡೆಯಲು ವಿಶೇಷ ಯತ್ನ ಕೈಗೊಂಡಿದ್ದು, ಈ ಸಂಬಂಧ ಅಧಿವೇಶನ ನಂತರ ದೆಹಲಿಗೆ ಹೋಗುವುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಳಸಾ ಬಂಡೂರಿ ಯೋಜನೆ ಬಗ್ಗೆ ಕೇಂದ್ರ ಜಲಶಕ್ತಿ ಸಚಿವರೊಂದಿಗೆ ಚರ್ಚಿಸಿದ್ದೇನೆ.ಯೋಜನೆಗೆ ಅನುಮೋದನೆ ವಿಚಾರ ಅಂತಿಮ ಘಟ್ಟದಲ್ಲಿದೆ. ಅಧಿವೇಶನ ಮುಗಿದ ನಂತರ ದೆಹಲಿಗೆ ತೆರಳಿ ಸಂಬಂಧಿಸಿದ ಸಚಿವರೊಂದಿಗೆ ಚರ್ಚಿಸುವುದಾಗಿ ತಿಳಿಸಿದರು.

ಮಹದಾಯಿ ನ್ಯಾಯಾಧೀಕರಣದಿಂದ ಹಂಚಿಕೆಯಾದ ನಮ್ಮ ಪಾಲಿನ ನೀರು ಬಳಕೆಗೆ ಯಾವುದೇ ಅಡ್ಡಿಯಾಗದು. ನಮ್ಮ ಡಿಪಿಆರ್ ಮಾದರಿಯಲ್ಲಿ ಕಾಮಗಾರಿ ಕೈಗೊಳ್ಳಲಾಗುವುದು. ಮಹದಾಯಿ ನದಿ ನೀರು ಹಂಚಿಕೆ ಬಗ್ಗೆ ಮೂರು ರಾಜ್ಯಗಳ ವ್ಯಾಜ್ಯ ಸುಪ್ರೀಂ ಕೋರ್ಟ್ ನಲ್ಲಿ ಇದೆ. ಅದು ಕಳಸಾ ಬಂಡೂರಿಗೆ ಅಡ್ಡಿಯಾಗದು.

ಮುಂದಿನ ತಿಂಗಳ ಅಂತ್ಯದ ವೇಳೆಗೆ ಅನುಮೋದನೆ ದೊರೆಯುವ ವಿಶ್ವಾಸವಿದೆ. ಯೋಜನೆಗೆ ಆಯವ್ಯಯದಲ್ಲಿ 1000 ಕೋಟಿ ರೂ ತೆಗೆದಿರಿಸಿರುವುದು ದೊಡ್ಡ ನೆಗೆತ ಎಂದರು.

ಮೇಕದಾಟು ಯೋಜನೆ ವಿವಾದ 1996 ರಿಂದ ಇದೆ. 2012ರಲ್ಲಿ ನಾನೇ ಡಿಪಿಆರ್ ಬದಲು ಮಾಡಲು ಕ್ರಮ ಕೈಗೊಂಡಿದ್ದೆ. ಯೋಜನೆಗೆ ಕೇಂದ್ರದ ಅನುಮೋದನೆ ಅವಶ್ಯವಾಗಿದೆ. ಅನುಮೋದನೆ ವಿಶ್ವಾಸದಲ್ಲಿ ಆಯವ್ಯಯದಲ್ಲಿ 1000 ಕೋಟಿ ರೂ. ಇರಿಸಿದ್ದೇನೆ ವಿನಹ ಕಾಂಗ್ರೆಸ್ ಹೋರಾಟ ಕಾರಣಕ್ಕಾಗಿ ಅಲ್ಲ ಎಂದರು.

ಕೃಷ್ಣ ಮೇಲ್ದಂಡೆ ಯೋಜನೆ ರಾಷ್ಟ್ರೀಯ ನೀರಾವರಿ ಯೋಜನೆ ಘೋಷಣೆ ಬೇಡಿಕೆ ಇದೆ. ಇದಕ್ಕೆ ಕೆಲವೊಂದು ಮಾನದಂಡಗಳಿದ್ದು, ತಾಂತ್ರಿಕ ವರದಿ ಸಿದ್ದಪಡಿಸಿ ನಂತರ ಮುಂದಿನ ಕ್ರಮ ಕೈಗೊಳ್ಳುವುದಾಗಿ ಸಿಎಂ ತಿಳಿಸಿದರು.

ರಾಜ್ಯಾದ್ಯಂತ ಎಪಿಎಂಸಿ ಹಮಾಲರು, ಕೆಲಸಗಾರರಿಗೆ ವಸತಿ ಸೌಲಭ್ಯಕ್ಕೆ ಯೋಜನೆ ರೂಪಿಸಲಾಗುವುದು ಎಂದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12795
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು