ಧಾರವಾಡ: ಕನ್ನಡ ಸಾಹಿತ್ಯ ಪರಿಷತ್ಗೆ ಶೀಘ್ರವೇ ಚುನಾವಣೆ ನಡೆಸುವಂತೆ ನಿರ್ದೇಶನ ನೀಡಬೇಕು ಎಂದು ಕೋರಿ ಸಲ್ಲಿಕೆ ಯಾಗಿದ್ದ ಅರ್ಜಿಯನ್ನು ನಿಯಮಾ ನುಸಾರ ಪರಿಗಣಿಸಿ, ಎರಡು ತಿಂಗಳ ಒಳಗಾಗಿ ಇತ್ಯರ್ಥಗೊಳಿಸಬೇಕು ಎಂದು ಹೈಕೋರ್ಟ್ನ ಧಾರವಾಡ ಪೀಠ ಸರ್ಕಾರಕ್ಕೆ ಬುಧವಾರ ನಿರ್ದೇಶನ ನೀಡಿದೆ.
ಕೊಪ್ಪಳ ಜಿಲ್ಲೆಯ ಕುಷ್ಟಗಿ ತಾಲ್ಲೂಕಿನ ಗುಮಗೇರಾದ ಶೇಖರ ಗೌಡ ಮಾಲಿಪಾಟೀಲ ಎಂಬುವ ವರು ಈ ಕುರಿತು ಹೈಕೋರ್ಟ್ನಲ್ಲಿ ಅರ್ಜಿ ಸಲ್ಲಿಸಿದ್ದರು. ಇದನ್ನು ಪುರಸ್ಕರಿಸಿದ ನ್ಯಾಯಾಲಯ, ಅರ್ಜಿದಾರರ ಮನವಿಯನ್ನು ಶೀಘ್ರದಲ್ಲಿ ವಿಲೇವಾರಿ ಮಾಡುವಂತೆ ಆದೇಶಿಸಿದೆ.